ಈ ಕುರಿತು ಬಿಜೆಪಿ ರಾಜ್ಯ ಘಟಕದ ಅಧಿಕೃತ ಖಾತೆಯಿಂದ ಭಾನುವಾರ ಸರಣಿ ಟ್ವೀಟ್ ಮಾಡಿದ್ದು, ‘ಸಿದ್ದರಾಮಯ್ಯ ಅವರ ಮೊದಲ ದೆಹಲಿ ಭೇಟಿ ಶಿವಕುಮಾರ್ ಸಲ್ಲಿಸಿದ್ದ ಪದಾಧಿಕಾರಿಗಳ ಪಟ್ಟಿಯ ನಿರ್ಲಕ್ಷ್ಯಕ್ಕೆ ಕಾರಣವಾಯಿತು. ಎರಡನೇ ಭೇಟಿಯಿಂದ ಪದಾಧಿಕಾರಿಗಳ ಪಟ್ಟಿ ತಿರಸ್ಕೃತಗೊಂಡಿತು. ಮೂರನೇ ಭೇಟಿಯಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕುತ್ತು ತರಲಿದೆಯೆ?’ ಎಂಬ ಪ್ರಶ್ನೆಯನ್ನು ಮುಂದಿಡಲಾಗಿದೆ.