ಬಾದಾಮಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಕೆಲಸ ಮಾಡುವುದು ಬಿಟ್ಟು ಕುರ್ಚಿ ಉಳಿಸಿಕೊಳ್ಳಲು ಏನು ಮಾಡಬೇಕು ಎಂಬ ಪ್ರಯತ್ನದಲ್ಲಿದ್ದಾರೆ. ಅವರ ಪುತ್ರ ಭ್ರಷ್ಟಾಚಾರದ ಮೂಲಕ ರಾಜ್ಯವನ್ನೇ ಲೂಟಿ ಹೊಡೆಯುತ್ತಿದ್ದಾರೆ. ವರ್ಗಾವಣೆಯಲ್ಲೂ ಭ್ರಷ್ಟಾಚಾರ ನಡೆದಿದೆ. ಸಬ್ಇನ್ಸ್ಪೆಕ್ಟರ್ಗಳ ವರ್ಗಾವಣೆಗೂ ಒಂದು ಗ್ಯಾಂಗ್ ಮಾಡಿಕೊಂಡಿದ್ದಾರೆ. ಇದನ್ನು ಅಧಿಕಾರಿಯೊಬ್ಬರು ನನಗೆ ಹೇಳಿದರು. ಇದರಲ್ಲಿ ನೂರಾರು ಕೋಟಿ ಅವ್ಯವಹಾರ ನಡೆಯುತ್ತಿದೆ ಎಂದರು.