’ಬುದ್ಧಿವಂತಿಕೆ ಯಾರಪ್ಪನ ಮನೆ ಸ್ವತ್ತಲ್ಲ. ನಾನು ಪ್ರೈಮರಿ ಸ್ಕೂಲ್ ಓದುವಾಗ ಕುರಿ, ಎಮ್ಮೆ ಮೇಯಿಸೋಗು ಅಂತ ಕೆಲವರು ಹೇಳ್ತಿದ್ರು. ಅವರ ಮಾತನ್ನೇ ಕೇಳಿದ್ರೆ ಏನಾಗ್ತಿತ್ತು. ಜನ ಹೇಗೆ ದಾರಿ ತಪ್ಪಿಸುತ್ತಾರೆ ಅನ್ನೋದಕ್ಕೆ ಸಾಕ್ಷಿ ಇದು. ಬುದ್ಧಿವಂತಿಕೆ ವಂಶ ಪಾರಂಪರ್ಯವಾಗಿ ಬರುವುದಿಲ್ಲ, ಅದನ್ನು ಬೆಳೆಸಿಕೊಳ್ಳಬೇಕು. ಹೀಗಾಗಿ ಚೆನ್ನಾಗಿ ಓದಿ‘ ಎಂದು ನೆರೆದ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.