ಆರ್. ಟಿ. ನಗರದ ತಮ್ಮ ನಿವಾಸದ ಬಳಿ ಸೋಮವಾರ ರಾತ್ರಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ಸ್ವಾಮಿ ವಿವೇಕಾನಂದರು ಒಂದು ಮಾತು ಹೇಳಿದ್ದಾರೆ. ಸಾಧಕನಿಗೆ ಸಾವು ಅಂತ್ಯವಲ್ಲ ಸಾವಿನ ನಂತರವೂ ಬದುಕುವವನು ಸಾಧಕ . ಈ ಮಾತು ಸಿದ್ದೇಶ್ವರ ಸ್ವಾಮೀಜಿಗಳಿಗೆ ಅನ್ವಯವಾಗುತ್ತದೆ. ಅವರ ವಿಚಾರ, ತತ್ವ ಸಿದ್ದಾಂತ, ನಡೆ ನುಡಿಯಲ್ಲಿ ಅವರು ಸದಾಕಾಲ ನಮ್ಮೊಂದಿಗೆ ಇರುತ್ತಾರೆ ಎನ್ನುವ ನಂಬಿಕೆ ನನಗಿದೆ. ಮುಂದಿನ ಜನಾಂಗ ಸಿದ್ದೇಶ್ವರ ಗುರುಗಳನ್ನು ನೆನೆಸಿಕೊಳ್ಳುತ್ತದೆ. ಸಿದ್ದೇಶ್ವರ ಸ್ವಾಮಿಜಿ ಅವರ ಕಾಲದಲ್ಲಿ ನಾವಿದ್ದೇವು ಎನ್ನುವುದು ಭಾಗ್ಯ. ಅವರು ಯಾವುದೇ ಪಂಥ, ಮತ ಪಾಲಿಸಿದವರಲ್ಲ. ಅವರ ನಡೆ ನುಡಿಯಲ್ಲಿ ಯಾವುದೇ ವ್ಯತ್ಯಾಸ ಇರಲಿಲ್ಲ. ಅವರು ಅತ್ಯಂತ ಮೇಲ್ಪಂಕ್ತಿಯ ಸಂತ. ಅವರು ಯಾರಿಂದಲೂ ಏನನ್ನೂ ಬೇಡಿಲ್ಲ. ಅಪಾರ ಜ್ಞಾನ ಭಂಡಾರವನ್ನು ಕೊಟ್ಟುಹೋಗಿದ್ದಾರೆ ಎಂದರು.