ವಿಜಯೇಂದ್ರ ಅವರನ್ನು ಉಸ್ತುವಾರಿ ಪಟ್ಟಿಯಲ್ಲಿ ಸೇರಿಸದ ಕಾರಣ, ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ವಿರುದ್ಧ ಅಭಿಮಾನಿಗಳು ಮತ್ತು ಬೆಂಬಲಿಗರು ಹರಿಹಾಯ್ದಿದ್ದರು. ವಿಜಯೇಂದ್ರ ಈ ಸಂಬಂಧ ಹೇಳಿಕೆ ನೀಡಿ ಟೀಕೆಗಳನ್ನು ಖಂಡಿಸಿದ್ದರು. ಅದರ ಬೆನ್ನಲ್ಲೇ ಪರಿಷ್ಕೃತ ಆದೇಶ ಹೊರ ಬಿದ್ದಿದೆ.