ಕಲಾಕ್ಷೇತ್ರದ ಆವರಣದಲ್ಲಿ ಸುಬ್ಬಣ್ಣ ಅವರು ಚಿರನಿದ್ದೆಗೆ ಜಾರಿದ್ದರೇ, ಅವರು ಹಾಡಿದ್ದ ಗೀತೆಗಳನ್ನು ಶಿಷ್ಯರು ಹಾಗೂ ಸಮಕಾಲೀನರು ಹಾಡುವ ಮೂಲಕ ಗೀತ ನಮನ ಸಲ್ಲಿಸಿದರು. ಸಾಹಿತ್ಯ, ಸಂಗೀತ, ನೃತ್ಯ, ರಂಗಭೂಮಿ ಸೇರಿ ವಿವಿಧ ಕ್ಷೇತ್ರಗಳ ಪ್ರಮುಖರು ತಮ್ಮ ನೆಚ್ಚಿನ ಗಾಯಕನ ಅಂತಿಮ ದರ್ಶನ ಪಡೆದುಕೊಂಡರು. ಬ್ರಾಹ್ಮಣ ಸಂಪ್ರದಾಯದಂತೆ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದ ಪುತ್ರ ಶ್ರೀರಂಗ, ಬನಶಂಕರಿಯ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಗಾಯಕನಿಗೆ ಸರ್ಕಾರಿ ಗೌರವದೊಂದಿಗೆ ವಿದಾಯ ಹೇಳಲಾಯಿತು.