'ಬಹುಭಾಷಾ ಗಾಯಕರಾಗಿದ್ದ ಕಂಚಿನ ಕಂಠದ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರು 16 ಭಾರತೀಯ ಭಾಷೆಗಳಲ್ಲಿ 40,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ದಾಖಲೆ ಬರೆದ ಗಾಯಕ ಎಂಬುದು ಇತಿಹಾಸದಲ್ಲಿ ದಾಖಲಾಗಿದೆ. ಸರಸ್ವತಿ ಪುತ್ರರಾಗಿದ್ದ ಎಸ್ಪಿಬಿ ಸಂಗೀತ ಮಾಂತ್ರಿಕರಾಗಿದ್ದರು. ಅವರು ಹಾಡಿದ ಹಾಡುಗಳನ್ನು ಕೇಳುತ್ತಾ ಬೆಳೆದ ನಾವು ಅವರ ಅಗಲಿಕೆಯನ್ನೂ ನೋಡಬೇಕಾದ ಸಂದರ್ಭ ಬಂದಿದ್ದು ದುರ್ದೈವ' ಎಂದು ಹೇಳಿದ್ದಾರೆ.