ಇತ್ತೀಚೆಗಷ್ಟೇ ಭಯೋತ್ಪಾದನಾ ಚಟುವಟಿಕೆಯಲ್ಲಿ ಭಾಗಿಯಾಗಿರುವ ಸಂಶಯದಲ್ಲಿ 9 ಜನರನ್ನು ಪ್ರತ್ಯೇಕವಾಗಿ ತನಿಖಾ ದಳದವರು ಬಂಧಿಸಿದ್ದರು. ಇವರ ಜೊತೆ ನಂಟು ಹೊಂದಿರುವವರ ವಿಚಾರಣೆ ನಡೆಸಲಾಗುತ್ತಿದೆ. ಅರೆಕೊಪ್ಪದ ಯುವಕನ ಹೆಸರಿನಲ್ಲಿದ್ದ ಸಿಮ್ ಕಾರ್ಡ್ ಭಯೋತ್ಪಾದನಾ ಚಟುವಟಿಕೆಯಲ್ಲಿ ಬಳಕೆಯಾಗಿದೆ ಎನ್ನಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆದಿದೆ.