<p><strong>ಬೆಂಗಳೂರು:</strong> ‘ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ಬಗ್ಗೆ ತಮ್ಮ ಅನುಪಸ್ಥಿತಿಯಲ್ಲಿ ನಡೆಸಿರುವ ತನಿಖೆಗೆ ಬದ್ಧನಾಗಿದ್ದೇನೆ’ ಎಂದು ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಹೈಕೋರ್ಟ್ಗೆ ತಿಳಿಸಿದ್ದಾರೆ.</p>.<p>ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ಅವರು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದ ತನಿಖಾ ವರದಿಯನ್ನು ವೈದ್ಯಕೀಯ ರಜೆಯಲ್ಲಿದ್ದ ಸೌಮೇಂದು ಮುಖರ್ಜಿ ಅನುಮೋದಿಸಿರಲಿಲ್ಲ. ಇದನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ವರದಿ ಸ್ವೀಕರಿಸಲು ನಿರಾಕರಿಸಿತ್ತು.</p>.<p>‘ಎಸ್ಐಟಿ ಮುಖ್ಯಸ್ಥರು ಇಲ್ಲದಿದ್ದರೂ ತನಿಖೆಯನ್ನು ಸಮರ್ಪಕವಾಗಿ ನಡೆಸಲಾಗಿದೆ. ವರದಿ ಸಲ್ಲಿಸಲು ಸಂದೀಪ್ ಪಾಟೀಲ ಅವರಿಗೆ ಸೌಮೇಂದು ಮುಖರ್ಜಿ ಅವರು ಅಧಿಕಾರ ನೀಡಿದ್ದಾರೆ’ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ತಿಳಿಸಿದರು.</p>.<p>ಎಸ್ಐಟಿ ಸಲ್ಲಿಸಿದ ಹೆಚ್ಚುವರಿ ಹೇಳಿಕೆ ಪರಿಶೀಲಿಸಿದ ಪೀಠ, ‘ಅನುಪಸ್ಥಿತಿಯಲ್ಲಿ ನಡೆದ ತನಿಖೆ ಸರಿಯಾಗಿದೆಯೇ ಎಂಬುದನ್ನು ಅವರು ಪರಿಶೀಲಿಸಿದ್ದಾರೆಯೇ, ಸರಿಯಾಗಿ ನಡೆದಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಅವರು ಪ್ರಯತ್ನಿಸಿದ್ದಾರೆಯೇ’ ಎಂದು ಪ್ರಶ್ನಿಸಿತು.</p>.<p>‘ತನಿಖೆಗೆ ಬದ್ಧ ಎಂದು ಅವರು ಒಪ್ಪಿಗೆ ಸೂಚಿಸಿದ್ಧಾರೆ’ ಎಂದು ವಕೀಲರು ವಿವರಿಸಿದರು. ವಿಚಾರಣೆಯನ್ನು ಪೀಠ ಸೆ.3ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸಿ.ಡಿ ಪ್ರಕರಣದ ಬಗ್ಗೆ ತಮ್ಮ ಅನುಪಸ್ಥಿತಿಯಲ್ಲಿ ನಡೆಸಿರುವ ತನಿಖೆಗೆ ಬದ್ಧನಾಗಿದ್ದೇನೆ’ ಎಂದು ಎಸ್ಐಟಿ ಮುಖ್ಯಸ್ಥ ಸೌಮೇಂದು ಮುಖರ್ಜಿ ಹೈಕೋರ್ಟ್ಗೆ ತಿಳಿಸಿದ್ದಾರೆ.</p>.<p>ಜಂಟಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ಅವರು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಿದ್ದ ತನಿಖಾ ವರದಿಯನ್ನು ವೈದ್ಯಕೀಯ ರಜೆಯಲ್ಲಿದ್ದ ಸೌಮೇಂದು ಮುಖರ್ಜಿ ಅನುಮೋದಿಸಿರಲಿಲ್ಲ. ಇದನ್ನು ಗಮನಿಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ವರದಿ ಸ್ವೀಕರಿಸಲು ನಿರಾಕರಿಸಿತ್ತು.</p>.<p>‘ಎಸ್ಐಟಿ ಮುಖ್ಯಸ್ಥರು ಇಲ್ಲದಿದ್ದರೂ ತನಿಖೆಯನ್ನು ಸಮರ್ಪಕವಾಗಿ ನಡೆಸಲಾಗಿದೆ. ವರದಿ ಸಲ್ಲಿಸಲು ಸಂದೀಪ್ ಪಾಟೀಲ ಅವರಿಗೆ ಸೌಮೇಂದು ಮುಖರ್ಜಿ ಅವರು ಅಧಿಕಾರ ನೀಡಿದ್ದಾರೆ’ ಎಂದು ಅಡ್ವೊಕೇಟ್ ಜನರಲ್ ಪ್ರಭುಲಿಂಗ ಕೆ. ನಾವಡಗಿ ತಿಳಿಸಿದರು.</p>.<p>ಎಸ್ಐಟಿ ಸಲ್ಲಿಸಿದ ಹೆಚ್ಚುವರಿ ಹೇಳಿಕೆ ಪರಿಶೀಲಿಸಿದ ಪೀಠ, ‘ಅನುಪಸ್ಥಿತಿಯಲ್ಲಿ ನಡೆದ ತನಿಖೆ ಸರಿಯಾಗಿದೆಯೇ ಎಂಬುದನ್ನು ಅವರು ಪರಿಶೀಲಿಸಿದ್ದಾರೆಯೇ, ಸರಿಯಾಗಿ ನಡೆದಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಅವರು ಪ್ರಯತ್ನಿಸಿದ್ದಾರೆಯೇ’ ಎಂದು ಪ್ರಶ್ನಿಸಿತು.</p>.<p>‘ತನಿಖೆಗೆ ಬದ್ಧ ಎಂದು ಅವರು ಒಪ್ಪಿಗೆ ಸೂಚಿಸಿದ್ಧಾರೆ’ ಎಂದು ವಕೀಲರು ವಿವರಿಸಿದರು. ವಿಚಾರಣೆಯನ್ನು ಪೀಠ ಸೆ.3ಕ್ಕೆ ಮುಂದೂಡಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>