ನಿವೇಶನ ಹಂಚಿಕೆಗಾಗಿ ಕೈಗಾರಿಕಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಹಾಗೂ ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಜೊತೆಯಾಗಿ ‘ಲ್ಯಾಂಡ್ ಆಡಿಟ್’ ನಡೆಸಿ ವರದಿ ಸಲ್ಲಿಸಲಿದ್ದಾರೆ. ಅದಾದ ಬಳಿಕ, ಮೀಸಲಾತಿ ಅನ್ವಯ ಹಂಚಿಕೆಯಾಗಬೇಕಾದ ನಿವೇಶನಗಳನ್ನು ಕಾಲಮಿತಿಯಲ್ಲಿ ನೀಡಲಾಗುವುದು ಎಂದು ಹೇಳಿದರು.