ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಸರಾ ಉದ್ಘಾಟಿಸುವ ಅವಕಾಶ ನನ್ನ ಬಾಳಿನ ಸುದೈವ: ಎಸ್.ಎಂ. ಕೃಷ್ಣ

Last Updated 29 ಸೆಪ್ಟೆಂಬರ್ 2021, 16:41 IST
ಅಕ್ಷರ ಗಾತ್ರ

ಬೆಂಗಳೂರು: ‘ಈ ಬಾರಿ ಮೈಸೂರು ದಸರಾ ಉದ್ಘಾಟಿಸುವ ಅವಕಾಶ ಸಿಕ್ಕಿರುವುದು ನನ್ನ ಬಾಳಿನ ಸುದೈವ’ ಎಂದು ಬಿಜೆಪಿ ನಾಯಕ ಎಸ್.ಎಂ. ಕೃಷ್ಣ ಹೇಳಿದ್ದಾರೆ.

‘ಮನುಕುಲಕ್ಕೆ ಬಂದಿರುವ ಕೋವಿಡ್‌ ಮಹಾಮಾರಿಯಿಂದ ತಾಯಿ ಚಾಮುಂಡೇಶ್ವರಿ ಮುಕ್ತಿಗೊಳಿಸಿ, ನಾಡು ನಿಮ್ಮ ನೇತೃತ್ವದಲ್ಲಿ ಮತ್ತೆ ಅಭಿವೃದ್ಧಿಯೆಡೆಗೆ ಮುನ್ನಡೆಯಲಿ’ ಎಂದು ಆಶಿಸಿರುವ ಅವರು, ದಸರಾ ಉದ್ಘಾಟನೆಗೆ ಅವಕಾಶ ನೀಡಿದ್ದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಧನ್ಯವಾದ ತಿಳಿಸಿದ್ದಾರೆ.

‘ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ದೂರದೃಷ್ಟಿಯಿಂದ ಪ್ರತಿಷ್ಠಾಪನೆಗೊಂಡ ರೈತಾಪಿ ವರ್ಗವೇ ಆರ್ಥಿಕವಾಗಿರುವ ಮಂಡ್ಯ ಜಿಲ್ಲೆಯಿಂದ ಬಂದ ನನಗೆ ಈ ಅವಕಾಶ ಸಿಕ್ಕಿದೆ’ ಎಂದೂ ಅವರು ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT