‘ರಾಜ್ಯದಲ್ಲಿ ಪ್ರವರ್ಗಗಳ ಮೀಸಲಾತಿ ಪ್ರಮಾಣ ಶೇ 32ರಷ್ಟು ಇದೆ. ಈ ಪ್ರಮಾಣವನ್ನು ಹೆಚ್ಚಿಸುವಂತೆ ಹೋರಾಟಗಳು ನಡೆಯುತ್ತಿವೆ. ನೂರಾರು ಜಾತಿಗಳು ಹಿಂದುಳಿದ ವರ್ಗಗಳಲ್ಲಿದ್ದು, ಅವುಗಳು ಮೀಸಲಾತಿ ಪ್ರಮಾಣ ಹೆಚ್ಚಿಸುವಂತೆ ಬೇಡಿಕೆ ಇಟ್ಟಿವೆ. ಕುರುಬ ಸಮುದಾಯದವರು ಎಸ್ಟಿ ಜಾತಿಗೆ ಸೇರಿಸಬೇಕೆಂಬ ಒತ್ತಾಯಿಸುತ್ತಿದ್ದಾರೆ. ಮೀಸಲಾತಿ ಪ್ರಮಾಣ ಶೇ 50ರಷ್ಟು ಹೆಚ್ಚಿಸುವ ಸಂಬಂಧ ಸುಪ್ರೀಂ ಕೋರ್ಟ್ ಕೇಳಿರುವ ಅಭಿಪ್ರಾಯವನ್ನು ಶೀಘ್ರದಲ್ಲಿಯೇ ಕಳುಹಿಸಿಕೊಡಲಾಗುವುದು’ ಎಂದರು.