ಗ್ರಾಮ ಪಂಚಾಯಿತಿಗಳಿಗೆ ಸೌರವಿದ್ಯುತ್: ಈಶ್ವರಪ್ಪ

ಬೆಂಗಳೂರು: ‘ವಿದ್ಯುತ್ ಸಮಸ್ಯೆ ನಿವಾರಿಸುವ ಸಲುವಾಗಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೂ ಸೌರ ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಇದರಿಂದ ಪಂಚಾಯಿತಿಗಳಿಗೆ ಸಾಕಷ್ಟು ಹಣ ಉಳಿತಾಯವಾಗಲಿದೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಗ್ರಾಮ ಪಂಚಾಯಿತಿಯ ನೂತನ ಸದಸ್ಯರ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
‘ಗ್ರಾಮ ಪಂಚಾಯಿತಿಗಳಿಗೆ ವಿದ್ಯುತ್ ಬಿಲ್ ಹೊರೆಯಾಗಿ ಪರಿಣಮಿಸಿತ್ತು. ಹೀಗಾಗಿ ಪ್ರತಿ ಪಂಚಾಯಿತಿಗೆ ₹5 ಲಕ್ಷ ವೆಚ್ಚದಲ್ಲಿ ಸೋಲಾರ್ ವಿದ್ಯುತ್ ಕಲ್ಪಿಸಲಾಗುತ್ತಿದೆ. ವಿದ್ಯುತ್ ಸಮಸ್ಯೆಯ ನೆಪ ಹೇಳಿ ಅಧಿಕಾರಿಗಳು ರೈತರಿಗೆ ಅಗತ್ಯ ದಾಖಲೆ ಒದಗಿಸಲು ವಿಳಂಬ ಮಾಡುತ್ತಿದ್ದರು. ಇನ್ನು ಮುಂದೆ ಅದಕ್ಕೆ ಆಸ್ಪದ ಇರುವುದಿಲ್ಲ. ಪಂಚಾಯಿತಿಗಳು ತಮಗೆ ಅಗತ್ಯವಿರುವಷ್ಟು ವಿದ್ಯುತ್ ಬಳಸಿಕೊಂಡು ಉಳಿದಿದ್ದನ್ನು ಗ್ರಿಡ್ಗಳಿಗೆ ಮಾರಾಟ ಮಾಡಿ ಆದಾಯ ಗಳಿಸಬಹುದು’ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.