ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಲಂಬಾಣಿಗಳ ಕೆಣಕದಿರಿ’

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ ಕಟೀಲ್‌ಗೆ ಸೋಮಲಿಂಗೇಶ್ವರ ಸ್ವಾಮೀಜಿ ಎಚ್ಚರಿಕೆ
Last Updated 31 ಅಕ್ಟೋಬರ್ 2020, 19:35 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಲಂಬಾಣಿ ಸಮುದಾಯದವರು ಅಡವಿಯ ಹುಲಿಗಳು. ಒಳ ಮೀಸಲಾತಿಯ ನೆಪ ಮಾಡಿಕೊಂಡು ಅವರನ್ನು ಕೆಣಕಬೇಡಿ. ಪರಿಣಾಮ ಬೇರೆಯೇ ಆಗಲಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ ಕಟೀಲ್ ಅವರಿಗೆ ವಿಜಯಪುರ ಜಿಲ್ಲೆ ಕೇಸರಟ್ಟಿಯ ಶಂಕರಲಿಂಗ ಮಠದ ಸೋಮಲಿಂಗೇಶ್ವರ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಶಿರಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ನಳಿನ್ ಕುಮಾರ ಕಟೀಲ್, ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ. ಅದು ಖಂಡನೀಯ. ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಜಾತಿ, ಸಮಾಜಗಳ ನಡುವೆ ಬೆಂಕಿ ಹಚ್ಚುತ್ತಿರುವ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆದು ಬುದ್ಧಿ ಹೇಳಲಿ. ಇಲ್ಲದಿದ್ದರೆ ನಮ್ಮ ಸಮಾಜದಿಂದ ಬಿಜೆಪಿಯವರಿಗೆ ಬುದ್ಧಿವಾದ ಹೇಳುವ ದಿನಗಳು ಬರಲಿವೆ ಎಂದು ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT