ಪಬ್ಜಿ ಆಡಬೇಡ ಎಂದು ಸಾಕಷ್ಟು ಸಲ ಹೇಳಿದರೂ ಕೇಳಿರಲಿಲ್ಲ. ಆದ್ದರಿಂದ ಪೋಷಕರು ಇಂಟರ್ನೆಟ್ ಹಾಕಿಸಿರಲಿಲ್ಲ. ಇದರಿಂದ ಬೇಸತ್ತ ಯುವಕ ತೋಟದ ಮನೆಗೆ ಹೋಗಿ ಬೆಳೆಗಳಿಗೆ ಸಿಂಪಡಿಸುವ ರಾಸಾಯನಿಕ ಔಷಧ ಕುಡಿದಿದ್ದ. ಆತನನ್ನು ಆ. 31 ರಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆತ ಗುರುವಾರ ಮೃತಪಟ್ಟಿದ್ದಾನೆ ಎಂದು ಕಿಮ್ಸ್ ವೈದ್ಯರು ತಿಳಿಸಿದ್ದಾರೆ.