ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಷಕರು ಪಬ್ಜಿ ಆಡಬೇಡ ಎಂದಿದ್ದಕ್ಕೆ ಮಗ ಆತ್ಮಹತ್ಯೆ

Last Updated 10 ಸೆಪ್ಟೆಂಬರ್ 2020, 10:22 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಪಬ್ಜಿ ಆಟವನ್ನು ಆಡಬೇಡ ಎಂದು ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಹಾವೇರಿ ಜಿಲ್ಲೆಯ ಸಂಗೂರ ಗ್ರಾಮದ ತೇಜಸ್ ಸಿಡ್ಲಾಪುರ (17) ಎಂಬ ಯುವಕ ಮೃತಪಟ್ಟವ.

ಪಬ್ಜಿ ಆಡಬೇಡ ಎಂದು ಸಾಕಷ್ಟು ಸಲ ಹೇಳಿದರೂ ಕೇಳಿರಲಿಲ್ಲ. ಆದ್ದರಿಂದ ಪೋಷಕರು ಇಂಟರ್ನೆಟ್ ಹಾಕಿಸಿರಲಿಲ್ಲ. ಇದರಿಂದ ಬೇಸತ್ತ ಯುವಕ ತೋಟದ ಮನೆಗೆ ಹೋಗಿ ಬೆಳೆಗಳಿಗೆ ಸಿಂಪಡಿಸುವ ರಾಸಾಯನಿಕ ಔಷಧ ಕುಡಿದಿದ್ದ. ಆತನನ್ನು ಆ. 31 ರಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಆತ ಗುರುವಾರ ಮೃತಪಟ್ಟಿದ್ದಾನೆ ಎಂದು ಕಿಮ್ಸ್ ವೈದ್ಯರು ತಿಳಿಸಿದ್ದಾರೆ.

ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT