<p><strong>ಹಾವೇರಿ: </strong>ಚಾಲಕನ ನಿಯಂತ್ರಣ ತಪ್ಪಿ ಕಾರು ತುಂಗಾ ಎಡದಂಡೆ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.</p>.<p>ಹಾವೇರಿ ತಾಲ್ಲೂಕಿನ ನೆಗಳೂರು ಗ್ರಾಮದ ಸಿದ್ದನಗೌಡ ಬಿಷ್ಟನಗೌಡರ (45) ಮೃತರು.</p>.<p>ಹಾವೇರಿಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯ್ತಿ ಮತ ಎಣಿಕೆ ಹಿನ್ನೆಲೆಯಲ್ಲಿ ಕನವಳ್ಳಿ ಪರಮೇಶ್ವರ ದೇವಾಲಯದಲ್ಲಿ ಪೂಜೆ ಮಾಡಿಸಿಕೊಂಡು ಹಾವೇರಿಗೆ ಬರುವ ಸಂದರ್ಭ ದುರ್ಘಟನೆ ಸಂಭವಿಸಿದೆ.</p>.<p>ನೆಗಳೂರ ಗ್ರಾ.ಪಂ. ಮೊದಲನೇ ವಾರ್ಡಿನ ಅಭ್ಯರ್ಥಿ ಚನ್ನಬಸಪ್ಪ ಬನ್ನಿಮಟ್ಟಿ ಅವರ ಪುತ್ರಪ್ರಕಾಶ ಬನ್ನಿಮಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಚಾಲಕನ ನಿಯಂತ್ರಣ ತಪ್ಪಿ ಕಾರು ತುಂಗಾ ಎಡದಂಡೆ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.</p>.<p>ಹಾವೇರಿ ತಾಲ್ಲೂಕಿನ ನೆಗಳೂರು ಗ್ರಾಮದ ಸಿದ್ದನಗೌಡ ಬಿಷ್ಟನಗೌಡರ (45) ಮೃತರು.</p>.<p>ಹಾವೇರಿಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯ್ತಿ ಮತ ಎಣಿಕೆ ಹಿನ್ನೆಲೆಯಲ್ಲಿ ಕನವಳ್ಳಿ ಪರಮೇಶ್ವರ ದೇವಾಲಯದಲ್ಲಿ ಪೂಜೆ ಮಾಡಿಸಿಕೊಂಡು ಹಾವೇರಿಗೆ ಬರುವ ಸಂದರ್ಭ ದುರ್ಘಟನೆ ಸಂಭವಿಸಿದೆ.</p>.<p>ನೆಗಳೂರ ಗ್ರಾ.ಪಂ. ಮೊದಲನೇ ವಾರ್ಡಿನ ಅಭ್ಯರ್ಥಿ ಚನ್ನಬಸಪ್ಪ ಬನ್ನಿಮಟ್ಟಿ ಅವರ ಪುತ್ರಪ್ರಕಾಶ ಬನ್ನಿಮಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ.</p>.<p>ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>