ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಂಗಾ ಕಾಲುವೆಗೆ ಕಾರು ಉರುಳಿ ಗ್ರಾಮ ಪಂಚಾಯಿತಿ ಅಭ್ಯರ್ಥಿಯ ಪುತ್ರನಿಗೆ ತೀವ್ರ ಗಾಯ

Last Updated 30 ಡಿಸೆಂಬರ್ 2020, 6:11 IST
ಅಕ್ಷರ ಗಾತ್ರ

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ತುಂಗಾ ಎಡದಂಡೆ ಕಾಲುವೆಗೆ ಉರುಳಿ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ತಾಲ್ಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಬುಧವಾರ ಬೆಳಿಗ್ಗೆ ನಡೆದಿದೆ.

ಹಾವೇರಿ ತಾಲ್ಲೂಕಿನ ನೆಗಳೂರು ಗ್ರಾಮದ ಸಿದ್ದನಗೌಡ ಬಿಷ್ಟನಗೌಡರ (45) ಮೃತರು.

ಹಾವೇರಿಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯ್ತಿ ಮತ ಎಣಿಕೆ ಹಿನ್ನೆಲೆಯಲ್ಲಿ ಕನವಳ್ಳಿ ಪರಮೇಶ್ವರ ದೇವಾಲಯದಲ್ಲಿ ಪೂಜೆ ಮಾಡಿಸಿಕೊಂಡು ಹಾವೇರಿಗೆ ಬರುವ ಸಂದರ್ಭ ದುರ್ಘಟನೆ ಸಂಭವಿಸಿದೆ.

ನೆಗಳೂರ ಗ್ರಾ.ಪಂ. ಮೊದಲನೇ ವಾರ್ಡಿನ ಅಭ್ಯರ್ಥಿ ಚನ್ನಬಸಪ್ಪ ಬನ್ನಿಮಟ್ಟಿ ಅವರ ಪುತ್ರಪ್ರಕಾಶ ಬನ್ನಿಮಟ್ಟಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT