ಆಯುಧಪೂಜೆ, ವಿಜಯದಶಮಿ ಅಂಗವಾಗಿ ಪಾದಯಾತ್ರೆಗೆ 2 ದಿನ ಬಿಡುವು ನೀಡಲಾಗಿತ್ತು. ಅ.3ರಂದೇ ರಾಜ್ಯಕ್ಕೆ ಬಂದಿದ್ದ ಸೋನಿಯಾ ಅವರು ಎಚ್.ಡಿ.ಕೋಟೆ ತಾಲ್ಲೂಕಿನ ಬೀರಂಬಳ್ಳಿ ಗ್ರಾಮದ ಆರೆಂಜ್ ಕೌಂಟಿ ರೆಸಾರ್ಟ್ನಲ್ಲಿ ಪುತ್ರನೊಂದಿಗೆ 2 ದಿನ ವಾಸ್ತವ್ಯ ಹೂಡಿದ್ದರು. ಬಿಡುವಿನ ನಂತರ ರಾಹುಲ್ ಗಾಂಧಿ ಗುರುವಾರ ಬೆಳಿಗ್ಗೆ 6.30ಕ್ಕೆ ಪಾಂಡವಪುರ ಸಮೀಪದ ಬೆಳ್ಳಾಳೆ ಗ್ರಾಮದ ಮೂಲಕ ಪಾದಯಾತ್ರ ಆರಂಭಿಸಲಿದ್ದಾರೆ.