<p>ಬೆಂಗಳೂರು/ದಾವಣಗೆರೆ: ಮನೆ ನಿರ್ವಹಣೆಗಾಗಿ ರಾಜ್ಯದ ಎಲ್ಲ ಕುಟುಂಬಗಳ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಈ ವರ್ಷದ ಬಜೆಟ್ನಲ್ಲಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಸ್ತ್ರೀ ಸಾಮರ್ಥ್ಯ ಮತ್ತು ಸ್ತ್ರೀ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಯೋಜನೆ ರೂಪಿಸುತ್ತಿದೆ. ಮನೆ ನಿರ್ವಹಣೆ, ಕೋವಿಡ್ ಉಪಚಾರ, ಆರೋಗ್ಯ ಮುಂತಾದವುಗಳಿಗೆ ಸಹಾಯವಾಗುವಂತೆ ಪ್ರತಿ ಕುಟುಂಬಕ್ಕೆ ಅವರ ವೆಚ್ಚಕ್ಕೆ ಅನುಗುಣವಾಗಿ ₹ 1,000ದಿಂದ ₹ 2,000ದವರೆಗೂ ನೆರವು ನೀಡುವ ಯೋಚನೆ ಇದೆ’ ಎಂದರು.</p>.<p>ರೈತರು, ಕಾರ್ಮಿಕರು, ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಜನರು ಸೇರಿದಂತೆ ದುಡಿಯುವ ವರ್ಗಕ್ಕೆ ಅನುಕೂಲವಾಗುವಂತೆ ಬಜೆಟ್ನಲ್ಲಿ ಯೋಜನೆಗಳನ್ನು ಘೋಷಿಸಲಾಗುವುದು. ಪ್ರತಿ ಗ್ರಾಮದಲ್ಲಿ ಎರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ ₹ 5 ಲಕ್ಷದವರೆಗೂ ಸಹಾಯಧನ ನೀಡುವ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಫೆಬ್ರುವರಿ ಅಂತ್ಯದೊಳಗೆ ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಿದರು.</p>.<p>ಅಪೌಷ್ಟಿಕತೆಯಿಂದ ಬಳಲುತ್ತಿರುವ ಜನರು ಹೆಚ್ಚಿನ ಸಂಖ್ಯೆಯಲ್ಲಿರು 5–6 ಜಿಲ್ಲೆಗಳ ಜನರಿಗೆ ಪೌಷ್ಟಿಕ ಆಹಾರ ಒದಗಿಸಲು ವಿಶೇಷ ಯೋಜನೆ ರೂಪಿಸಲಾಗುವುದು ಎಂದರು.</p>.<p>‘ಫೆ. 17ಕ್ಕೆ ಬಜೆಟ್ ಸಾಧ್ಯತೆ’</p>.<p>‘ಫೆಬ್ರುವರಿ 17ಕ್ಕೆ ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>‘ಬಜೆಟ್ ತಯಾರಿ ಆರಂಭವಾಗಿದೆ. ವಿಧಾನಮಂಡಲದ ಜಂಟಿ ಅಧಿವೇಶನದ ದಿನಾಂಕವನ್ನು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುವುದು. ರಾಜ್ಯ ಸರ್ಕಾರದ ಆದಾಯವು ಮೂರು ಪಟ್ಟು ಹೆಚ್ಚಾಗಿದೆ. ಅದನ್ನು ಇನ್ನಷ್ಟು ಹೆಚ್ಚಿಸಲು ಗುರಿ ನಿಗದಿಪಡಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು/ದಾವಣಗೆರೆ: ಮನೆ ನಿರ್ವಹಣೆಗಾಗಿ ರಾಜ್ಯದ ಎಲ್ಲ ಕುಟುಂಬಗಳ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಈ ವರ್ಷದ ಬಜೆಟ್ನಲ್ಲಿ ಘೋಷಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಸ್ತ್ರೀ ಸಾಮರ್ಥ್ಯ ಮತ್ತು ಸ್ತ್ರೀ ಶಕ್ತಿಯನ್ನು ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಯೋಜನೆ ರೂಪಿಸುತ್ತಿದೆ. ಮನೆ ನಿರ್ವಹಣೆ, ಕೋವಿಡ್ ಉಪಚಾರ, ಆರೋಗ್ಯ ಮುಂತಾದವುಗಳಿಗೆ ಸಹಾಯವಾಗುವಂತೆ ಪ್ರತಿ ಕುಟುಂಬಕ್ಕೆ ಅವರ ವೆಚ್ಚಕ್ಕೆ ಅನುಗುಣವಾಗಿ ₹ 1,000ದಿಂದ ₹ 2,000ದವರೆಗೂ ನೆರವು ನೀಡುವ ಯೋಚನೆ ಇದೆ’ ಎಂದರು.</p>.<p>ರೈತರು, ಕಾರ್ಮಿಕರು, ಮಹಿಳೆಯರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಜನರು ಸೇರಿದಂತೆ ದುಡಿಯುವ ವರ್ಗಕ್ಕೆ ಅನುಕೂಲವಾಗುವಂತೆ ಬಜೆಟ್ನಲ್ಲಿ ಯೋಜನೆಗಳನ್ನು ಘೋಷಿಸಲಾಗುವುದು. ಪ್ರತಿ ಗ್ರಾಮದಲ್ಲಿ ಎರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ ₹ 5 ಲಕ್ಷದವರೆಗೂ ಸಹಾಯಧನ ನೀಡುವ ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಫೆಬ್ರುವರಿ ಅಂತ್ಯದೊಳಗೆ ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಿದರು.</p>.<p>ಅಪೌಷ್ಟಿಕತೆಯಿಂದ ಬಳಲುತ್ತಿರುವ ಜನರು ಹೆಚ್ಚಿನ ಸಂಖ್ಯೆಯಲ್ಲಿರು 5–6 ಜಿಲ್ಲೆಗಳ ಜನರಿಗೆ ಪೌಷ್ಟಿಕ ಆಹಾರ ಒದಗಿಸಲು ವಿಶೇಷ ಯೋಜನೆ ರೂಪಿಸಲಾಗುವುದು ಎಂದರು.</p>.<p>‘ಫೆ. 17ಕ್ಕೆ ಬಜೆಟ್ ಸಾಧ್ಯತೆ’</p>.<p>‘ಫೆಬ್ರುವರಿ 17ಕ್ಕೆ ಪ್ರಸಕ್ತ ಸಾಲಿನ ಬಜೆಟ್ ಮಂಡನೆಯಾಗುವ ಸಾಧ್ಯತೆ ಇದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>‘ಬಜೆಟ್ ತಯಾರಿ ಆರಂಭವಾಗಿದೆ. ವಿಧಾನಮಂಡಲದ ಜಂಟಿ ಅಧಿವೇಶನದ ದಿನಾಂಕವನ್ನು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗುವುದು. ರಾಜ್ಯ ಸರ್ಕಾರದ ಆದಾಯವು ಮೂರು ಪಟ್ಟು ಹೆಚ್ಚಾಗಿದೆ. ಅದನ್ನು ಇನ್ನಷ್ಟು ಹೆಚ್ಚಿಸಲು ಗುರಿ ನಿಗದಿಪಡಿಸಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>