ಬೆಂಗಳೂರು: ‘ಉತ್ತರ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಗೆ ನೀರುಣಿಸುವ ಕೃಷ್ಣಾ ಮೇಲ್ದಂಡೆ ಯೋಜನೆಯ (ಯುಕೆಪಿ) ಮೂರನೇ ಹಂತದ ಕಾಮಗಾರಿಗೆ ಹಣ ಮೀಸಲಿಟ್ಟು, ಯೋಜನೆ ಪೂರ್ಣಗೊಳಿಸಲು ಸರ್ಕಾರಗಳು ವಿಫಲವಾಗಿದ್ದರಿಂದ ಆ ಭಾಗದ ರೈತರು ಕಣ್ಣೀರು ಸುರಿಸುತ್ತಿದ್ದಾರೆ’ ಎಂದು ಹೇಳುತ್ತಾ ಭಾವುಕರಾದ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ ಅವರು ಕಣ್ಣೀರಿಟ್ಟ ಪ್ರಸಂಗ ವಿಧಾನಪರಿಷತ್ನಲ್ಲಿ ಶುಕ್ರವಾರ ನಡೆಯಿತು.