ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವೇಷ ಭಾಷಣ ಮತ್ತು ಪ್ರಚೋದನಕಾರಿ ಹೇಳಿಕೆ: ಶ್ರೀರಾಮಸೇನೆ ಸಂಘಟನೆಯ ಇಬ್ಬರ ಸೆರೆ

Last Updated 18 ಏಪ್ರಿಲ್ 2022, 5:36 IST
ಅಕ್ಷರ ಗಾತ್ರ

ರಾಯಚೂರು: ‘ದ್ವೇಷ ಭಾಷಣ ಮತ್ತು ಪ್ರಚೋದನಕಾರಿ ಹೇಳಿಕೆಗೆ ಸಂಬಂಧಿ ಸಿದಂತೆ ಶ್ರೀರಾಮಸೇನೆ ಸಂಘಟನೆಯ ಜಿಲ್ಲಾ ಘಟಕದ ಸಂಚಾಲಕ ರಾಜಚಂದ್ರ ರಾಮನಗೌಡ ಮತ್ತು ಅಧ್ಯಕ್ಷ ಮಂಜುನಾಥ ಭಾವಿ ಎಂಬುವರನ್ನು ಪಶ್ಚಿಮ ಪೊಲೀಸ್ ಠಾಣೆಯ ಪೊಲೀಸರು ಭಾನುವಾರ
ಬಂಧಿಸಿದ್ದಾರೆ.

‘ರಾಮನವಮಿ ದಿನದಂದು ನಗರದ ರಾಮಲಿಂಗೇಶ್ವರ ದೇವಸ್ಥಾನದ ಮೈದಾನದಲ್ಲಿ ಶ್ರೀರಾಮಸೇನೆ ಸಂಘಟನೆ ಆಯೋಜಿಸಿದ್ದ ಹಿಂದೂ ಸಮಾವೇಶದಲ್ಲಿ ಪ್ರಚೋದನಾಕಾರಿ ಹೇಳಿಕೆ, ಒಂದು ಧರ್ಮದ ವಿರುದ್ಧ ದ್ವೇಷ ಭಾಷಣ ಮತ್ತು ಭಯ ಉಂಟು ಮಾಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಘಟನೆ ಬಳಿಕ ಇಬ್ಬರೂ ತಲೆ ಮರೆಸಿಕೊಂಡಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT