<p><strong>ಚಿಕ್ಕಮಗಳೂರು:</strong> ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶಂಕರಾಚಾರ್ಯ ಪ್ರತಿಮೆ ಇರುವ ಮಂಟಪದ ಗೋಪುರದ ಮೇಲೆ ಮಸೀದಿ ಚಿತ್ರವಿರುವ ಬಟ್ಟೆಯೊಂದು (ಹಸಿರು, ಕೆಂಪು, ತಿಳಿನೀಲಿ ಬಣ್ಣ) ಗುರುವಾರ ಕಂಡುಬಂದಿದೆ. ಇದರಿಂದ ವೃತ್ತದಲ್ಲಿ ಕೆಲಕಾಲ ಗೊಂದಲ ಸೃಷ್ಟಿಯಾಗಿತ್ತು.</p>.<p>ಬಜರಂಗ ದಳ, ಶ್ರೀರಾಮ ಸೇನೆ, ಬಿಜೆಪಿ ಮುಖಂಡರು, ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಕಿಡಿಗೇಡಿಗಳ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>‘ಶಂಕರಾಚಾರ್ಯರ ಪ್ರತಿಮೆ ಮೇಲೆ ಎಸ್ಡಿಪಿಐ ಬಾವುಟ ಹಾಕಲಾಗಿದೆ. ಬೆಂಗಳೂರಿನಲ್ಲಿ ನವೀನ್ ಫೇಸ್ಬುಕ್ನಲ್ಲಿ ಸತ್ಯವನ್ನೇ ಪೋಸ್ಟ್ ಮಾಡಿದ್ದಾನೆ. ಆರೋಪಿಗಳನ್ನು ಬಂಧಿಸದಿದ್ದರೆ ನಮ್ಮ ಪ್ರಕ್ರಿಯೆ ಶುರು ಮಾಡುತ್ತೇವೆ’ ಎಂದು ಬಿಜೆಪಿ ಮುಖಂಡ ಡಿ.ಎನ್. ಜೀವರಾಜ್ ಪೊಲೀಸರನ್ನು ಒತ್ತಾಯಿಸಿದರು.</p>.<p>ಈ ಸಂಬಂಧ ಶೃಂಗೇರಿಯ ಅರ್ಜನ್ ಎಂಬುವವರು ದೂರು ದಾಖಲಿಸಿದ್ದಾರೆ.</p>.<p><strong>‘ಶೀಘ್ರದಲ್ಲಿ ಪತ್ತೆ ಹಚ್ಚುತ್ತೇವೆ’:</strong> ‘ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ ಮಾಡುತ್ತಿದ್ದೇವೆ. ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಹಚ್ಚುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ತಿಳಿಸಿದ್ದಾರೆ.</p>.<p><strong>‘ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ’:</strong> ‘ಜೀವರಾಜ್ ಆರೋಪದಲ್ಲಿ ಹುರುಳಿಲ್ಲ. ಬೆಂಗಳೂರಿನ ಪ್ರಕರಣಕ್ಕೆ ಈ ಕೃತ್ಯವನ್ನು ತಳಕು ಹಾಕುವ ಯತ್ನ ಮಾಡಿದ್ದಾರೆ. ಪ್ರಕರಣಕ್ಕೂ ಎಸ್ಡಿಪಿಐಗೂ ಸಂಬಂಧ ಇಲ್ಲ. ಶೃಂಗೇರಿಯಲ್ಲಿ ಎಸ್ಡಿಪಿಐ ಅಸ್ತಿತ್ವದಲ್ಲಿ ಇಲ್ಲ. ಈ ಕೃತ್ಯ ಖಂಡನೀಯ. ಪೊಲೀಸರು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ’ ಎಂದು ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಅಜ್ಮತ್ ಪಾಷಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಶಂಕರಾಚಾರ್ಯ ಪ್ರತಿಮೆ ಇರುವ ಮಂಟಪದ ಗೋಪುರದ ಮೇಲೆ ಮಸೀದಿ ಚಿತ್ರವಿರುವ ಬಟ್ಟೆಯೊಂದು (ಹಸಿರು, ಕೆಂಪು, ತಿಳಿನೀಲಿ ಬಣ್ಣ) ಗುರುವಾರ ಕಂಡುಬಂದಿದೆ. ಇದರಿಂದ ವೃತ್ತದಲ್ಲಿ ಕೆಲಕಾಲ ಗೊಂದಲ ಸೃಷ್ಟಿಯಾಗಿತ್ತು.</p>.<p>ಬಜರಂಗ ದಳ, ಶ್ರೀರಾಮ ಸೇನೆ, ಬಿಜೆಪಿ ಮುಖಂಡರು, ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು. ಕಿಡಿಗೇಡಿಗಳ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.</p>.<p>‘ಶಂಕರಾಚಾರ್ಯರ ಪ್ರತಿಮೆ ಮೇಲೆ ಎಸ್ಡಿಪಿಐ ಬಾವುಟ ಹಾಕಲಾಗಿದೆ. ಬೆಂಗಳೂರಿನಲ್ಲಿ ನವೀನ್ ಫೇಸ್ಬುಕ್ನಲ್ಲಿ ಸತ್ಯವನ್ನೇ ಪೋಸ್ಟ್ ಮಾಡಿದ್ದಾನೆ. ಆರೋಪಿಗಳನ್ನು ಬಂಧಿಸದಿದ್ದರೆ ನಮ್ಮ ಪ್ರಕ್ರಿಯೆ ಶುರು ಮಾಡುತ್ತೇವೆ’ ಎಂದು ಬಿಜೆಪಿ ಮುಖಂಡ ಡಿ.ಎನ್. ಜೀವರಾಜ್ ಪೊಲೀಸರನ್ನು ಒತ್ತಾಯಿಸಿದರು.</p>.<p>ಈ ಸಂಬಂಧ ಶೃಂಗೇರಿಯ ಅರ್ಜನ್ ಎಂಬುವವರು ದೂರು ದಾಖಲಿಸಿದ್ದಾರೆ.</p>.<p><strong>‘ಶೀಘ್ರದಲ್ಲಿ ಪತ್ತೆ ಹಚ್ಚುತ್ತೇವೆ’:</strong> ‘ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಾವಳಿ ಪರಿಶೀಲನೆ ಮಾಡುತ್ತಿದ್ದೇವೆ. ಆರೋಪಿಗಳನ್ನು ಶೀಘ್ರದಲ್ಲಿ ಪತ್ತೆ ಹಚ್ಚುತ್ತೇವೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಎಂ.ಹಾಕೆ ತಿಳಿಸಿದ್ದಾರೆ.</p>.<p><strong>‘ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ’:</strong> ‘ಜೀವರಾಜ್ ಆರೋಪದಲ್ಲಿ ಹುರುಳಿಲ್ಲ. ಬೆಂಗಳೂರಿನ ಪ್ರಕರಣಕ್ಕೆ ಈ ಕೃತ್ಯವನ್ನು ತಳಕು ಹಾಕುವ ಯತ್ನ ಮಾಡಿದ್ದಾರೆ. ಪ್ರಕರಣಕ್ಕೂ ಎಸ್ಡಿಪಿಐಗೂ ಸಂಬಂಧ ಇಲ್ಲ. ಶೃಂಗೇರಿಯಲ್ಲಿ ಎಸ್ಡಿಪಿಐ ಅಸ್ತಿತ್ವದಲ್ಲಿ ಇಲ್ಲ. ಈ ಕೃತ್ಯ ಖಂಡನೀಯ. ಪೊಲೀಸರು ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ’ ಎಂದು ಎಸ್ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಅಜ್ಮತ್ ಪಾಷಾ ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>