ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು, ‘ವಿರೋಧ ಪಕ್ಷದಲ್ಲಿರುವವರು ಈ ರೀತಿ ಹೇಳಿಕೆ ಕೊಡುವುದೇ? ಅವರು ಸಿ.ಎಂ ಆಗಿದ್ದಾಗ ಮುಂದಿನ ಬಾರಿಗೆ ದಲಿತರನ್ನು ಮುಖ್ಯಮಂತ್ರಿ ಮಾಡುತ್ತೇನೆ’ ಎನ್ನುತ್ತಿದ್ದರು. ಆಮೇಲೆ ಮಾತು ಬದಲಿಸಿ, ನಾನೇ ಮುಂದಿನ ಮುಖ್ಯಮಂತ್ರಿ ಎಂದು ಅಂಬಾರಿ ಮೇಲೆ ಕುಳಿತುಕೊಂಡು ಬಂದರು’ ಎಂದು ವ್ಯಂಗ್ಯವಾಡಿದರು.