ಇದೇ ಸಂದರ್ಭದಲ್ಲಿ ಅವರು, ಕೋವಿಡ್ ಕಾರಣದಿಂದ ಮಕ್ಕಳ ಸುರಕ್ಷತೆ ಮತ್ತು ಪರೀಕ್ಷಾ ಪಾರದರ್ಶಕತೆ ಕಾಪಾಡಿಕೊಂಡು ನಡೆಸಿದ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಾಕ್ಷ್ಯಚಿತ್ರ ‘ವಿದ್ಯಾ ಸಂಜೀವಿನಿ’ ಬಿಡುಗಡೆ ಮಾಡಿದರು. ಅಲ್ಲದೆ, ಮೂರು ವರ್ಷಗಳಲ್ಲಿ ಕರ್ನಾಟಕ ಪರೀಕ್ಷಾ ಮಂಡಳಿ ಡಿಜಿಟಲ್ ಪ್ರಕ್ರಿಯೆಗೆ ತೆರೆದುಕೊಂಡಿರುವುದನ್ನು ಅನಾವರಣಗೊಳಿಸುವ ‘ಡಿಜಿಟಲ್ ಕ್ರಾಂತಿಕಿರಣ’ ಸಾಕ್ಷ್ಯಚಿತ್ರ ಮತ್ತು 2020ರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶದ ವಿಶ್ಲೇಷಣೆಯ ವಿವರಗಳನ್ನು ಒಳಗೊಂಡ ಫಲಿತಾಂಶ ವಿಶ್ಲೇಷಣೆ ಮತ್ತು ಮುಂದಿನ ವರ್ಷದ ಕ್ರಿಯಾ ಯೋಜನೆ ವಿವರಗಳ ‘ಅನಾವರಣ’ ಸಂಚಿಕೆಯನ್ನೂ ಬಿಡುಗಡೆ ಮಾಡಿದರು.