<p><strong>ಬೆಂಗಳೂರು</strong>: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಕನಿಷ್ಠ ಎರಡು ತಿಂಗಳು ವಿಳಂಬವಾಗಿ ನಡೆಯುವ ಸಾಧ್ಯತೆ ಇದೆ.</p>.<p>ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸುವಂತೆ ರಾಜ್ಯ ಪ್ರೌಢಶಿಕ್ಷಣ ಮತ್ತು ಪರೀಕ್ಷಾ ಮಂಡಳಿ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಇತ್ತೀಚೆಗೆ ಸೂಚನೆ ನೀಡಿತ್ತು. ಆದರೆ, ಇದೀಗ ವೇಳಾಪಟ್ಟಿ ಸಿದ್ಧಪಡಿಸಲು ಇನ್ನೂ ಕೆಲವು ದಿನಗಳು ಕಾಯುವಂತೆ ಸೂಚನೆ ನೀಡಿದೆ.</p>.<p>‘ಶಾಲೆ, ಪದವಿಪೂರ್ವ ತರಗತಿಗಳು ಇನ್ನೂ ಆರಂಭವಾಗಿಲ್ಲ. ಅಲ್ಲದೆ, ಆನ್ಲೈನ್– ಆಫ್ಲೈನ್ ಶಿಕ್ಷಣ ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ತಲುಪುತ್ತಿಲ್ಲ. ಹೀಗಾಗಿ, ಪ್ರತಿ ವರ್ಷ ಮಾರ್ಚ್– ಏಪ್ರಿಲ್ ತಿಂಗಳಲ್ಲಿ ನಡೆಸುವ ಪರೀಕ್ಷೆಗಳನ್ನು ಜೂನ್– ಜುಲೈ ತಿಂಗಳಿಗೆ ಮುಂದೂಡುವಂತೆ ತಾಂತ್ರಿಕ ಸಮಿತಿ ಸಲಹೆ ನೀಡಿದೆ.</p>.<p>‘ಪರೀಕ್ಷೆಗಳನ್ನು ಎರಡು ತಿಂಗಳಮಟ್ಟಿಗೆ ಮುಂದೂಡುವಂತೆ ನಾವು ಸಲಹೆ ನೀಡಿದ್ದೇವೆ’ ಎಂದು ತಾಂತ್ರಿಕ ಸಮಿತಿಯ ಸದಸ್ಯ ಡಾ.ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ. ಅಲ್ಲದೆ, ಶಾಲಾ ಅವಧಿಗೆ ಅವಕಾಶ ಕಲ್ಪಿಸಲು ಮುಂದಿನ ವರ್ಷದ ಬೇಸಿಗೆ ರಜಾ ದಿನವನ್ನು ಕಡಿತಗೊಳಿಸುವಂತೆಯೂ ಸಮಿತಿ ಸಲಹೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳು ಕನಿಷ್ಠ ಎರಡು ತಿಂಗಳು ವಿಳಂಬವಾಗಿ ನಡೆಯುವ ಸಾಧ್ಯತೆ ಇದೆ.</p>.<p>ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸುವಂತೆ ರಾಜ್ಯ ಪ್ರೌಢಶಿಕ್ಷಣ ಮತ್ತು ಪರೀಕ್ಷಾ ಮಂಡಳಿ ಮತ್ತು ಪದವಿಪೂರ್ವ ಶಿಕ್ಷಣ ಇಲಾಖೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಇತ್ತೀಚೆಗೆ ಸೂಚನೆ ನೀಡಿತ್ತು. ಆದರೆ, ಇದೀಗ ವೇಳಾಪಟ್ಟಿ ಸಿದ್ಧಪಡಿಸಲು ಇನ್ನೂ ಕೆಲವು ದಿನಗಳು ಕಾಯುವಂತೆ ಸೂಚನೆ ನೀಡಿದೆ.</p>.<p>‘ಶಾಲೆ, ಪದವಿಪೂರ್ವ ತರಗತಿಗಳು ಇನ್ನೂ ಆರಂಭವಾಗಿಲ್ಲ. ಅಲ್ಲದೆ, ಆನ್ಲೈನ್– ಆಫ್ಲೈನ್ ಶಿಕ್ಷಣ ಸಮರ್ಪಕವಾಗಿ ವಿದ್ಯಾರ್ಥಿಗಳಿಗೆ ತಲುಪುತ್ತಿಲ್ಲ. ಹೀಗಾಗಿ, ಪ್ರತಿ ವರ್ಷ ಮಾರ್ಚ್– ಏಪ್ರಿಲ್ ತಿಂಗಳಲ್ಲಿ ನಡೆಸುವ ಪರೀಕ್ಷೆಗಳನ್ನು ಜೂನ್– ಜುಲೈ ತಿಂಗಳಿಗೆ ಮುಂದೂಡುವಂತೆ ತಾಂತ್ರಿಕ ಸಮಿತಿ ಸಲಹೆ ನೀಡಿದೆ.</p>.<p>‘ಪರೀಕ್ಷೆಗಳನ್ನು ಎರಡು ತಿಂಗಳಮಟ್ಟಿಗೆ ಮುಂದೂಡುವಂತೆ ನಾವು ಸಲಹೆ ನೀಡಿದ್ದೇವೆ’ ಎಂದು ತಾಂತ್ರಿಕ ಸಮಿತಿಯ ಸದಸ್ಯ ಡಾ.ಸಿ.ಎನ್. ಮಂಜುನಾಥ್ ತಿಳಿಸಿದ್ದಾರೆ. ಅಲ್ಲದೆ, ಶಾಲಾ ಅವಧಿಗೆ ಅವಕಾಶ ಕಲ್ಪಿಸಲು ಮುಂದಿನ ವರ್ಷದ ಬೇಸಿಗೆ ರಜಾ ದಿನವನ್ನು ಕಡಿತಗೊಳಿಸುವಂತೆಯೂ ಸಮಿತಿ ಸಲಹೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>