ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೆ, ಅರ್ಹ ಪುನರಾವರ್ತಿತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೊರೊನಾ ಸೇರಿದಂತೆ ಇತರ ಕಾರಣಗಳಿಗೆ ಪರೀಕ್ಷೆಗೆ ಹಾಜರಾಗಲು ಸಾಧ್ಯವಾಗದ ವಿದ್ಯಾರ್ಥಿಗಳಿಗೆ ಈ ಪೂರಕ ಪರೀಕ್ಷೆಯನ್ನು ‘ಪ್ರಥಮ ಅವಕಾಶ’ ಎಂದೇ ಪರಿಗಣಿಸಲಾಗುತ್ತದೆ. ಅಲ್ಲದೆ, ಈ ಕಾರಣಗಳಿಗೆ ಕೆಲವು ವಿಷಯಗಳಿಗೆ ಹಾಜರಾಗಿ, ಕೆಲವು ವಿಷಯಗಳ ಪರೀಕ್ಷೆಗೆ ಗೈರಾದವರು ಪೂರಕ ಪರೀಕ್ಷೆ ಬರೆದರೂ ‘ಪ್ರಥಮ ಅವಕಾಶ’ ಎಂದೇ ಪರಿಗಣಿಸಲಾಗುತ್ತದೆ. ಆದರೆ, ಎಲ್ಲ ಆರು ವಿಷಯಗಳ ಪರೀಕ್ಷೆಗೆ ಹಾಜರಾಗಿದ್ದು, ಯಾವುದೇ ಒಂದು ವಿಷಯದಲ್ಲಿ ಅನುತ್ತೀರ್ಣ ಆಗಿದ್ದರೂ ಆ ವಿದ್ಯಾರ್ಥಿಯನ್ನು ಅನುತ್ತೀರ್ಣ ವಿದ್ಯಾರ್ಥಿ ಮತ್ತು ಪೂರಕ ಪರೀಕ್ಷೆಯನ್ನು ಎರಡನೇ ಪ್ರಯತ್ನ ಎಂದು ಪರಿಗಣಿಸಲಾಗುತ್ತದೆ.