ಗಂಗಾವತಿ (ಕೊಪ್ಪಳ ಜಿಲ್ಲೆ):ಈಡಿಗ ಸಮುದಾಯವನ್ನು ಪರಿಶಿಷ್ಟ ಪಂಗಡ ಪಟ್ಟಿಗೆ ಸೇರಿಸಬೆಕು. ಸೇಂದಿ ಇಳಿಸಲು ಅವಕಾಶ ನೀಡಬೇಕು ಎಂಬುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮಂಗಳೂರಿನಿಂದ ಬೆಂಗಳೂರಿಗೆ ಜನವರಿ 6ರಿಂದ ಪಾದಯಾತ್ರೆ ನಡೆಸಲಿದ್ದೇವೆ ಎಂದು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳದ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ತಿಳಿಸಿದರು.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು, ‘658 ಕಿ.ಮೀ. ಪಾದಯಾತ್ರೆ ನಡೆಸಿ, ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ ಎಂದರು.
ರಾಜ್ಯದಲ್ಲಿಈಡಿಗ ಸಮಾಜದ ಜನಸಂಖ್ಯೆ 70 ಲಕ್ಷ ಇದೆ. ಈಡಿಗ ಸಮಾಜದ 7 ಶಾಸಕರು, ಇಬ್ಬರು ಮಂತ್ರಿಗಳು ಇದ್ದರೂ ಅಭಿವೃದ್ಧಿಗೆ ನಿರ್ಲಕ್ಷ್ಯ ತೋರುತ್ತಿದ್ದಾರೆ.2004ರಲ್ಲಿ ಈಡಿಗ ಸಮಾಜದ ಕಸುಬು ಕಸಿದುಕೊಂಡು ಪರ್ಯಾಯ ವ್ಯವಸ್ಥೆ ನೀಡದೆ, ಕತ್ತಲಲ್ಲಿ ಕವಿಯುವಂತೆ ಮಾಡಿದೆ ಎಂದು ದೂರಿದರು.ರಾಜ್ಯದಲ್ಲಿ ಪರವಾನಗಿ ಇಲ್ಲದೆ ಈಚಲು ಮರ ಕಡಿಯುವಂತಿಲ್ಲ. ಮಕ್ಕಳ ಶಿಕ್ಷಣಕ್ಕೆ ಸಾಲ ವ್ಯವಸ್ಥೆ ಇದೆ. ಕರ್ನಾಟಕದಲ್ಲಿ ಏಕೆ ಸೇಂದಿ ಇಳಿಕೆ ಸೌಲಭ್ಯವಿಲ್ಲ ಎಂದು ಅವರು ಪ್ರಶ್ನಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.