‘ಸಮುದಾಯದ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇ 3.5ರಿಂದ ಶೇ 7ಕ್ಕೆ ಮೀಸಲಾತಿ ಹೆಚ್ಚಿಸಬೇಕಿದೆ. ಸದ್ಯ ಉಪಚುನಾವಣೆಯ ನೀತಿ-ಸಂಹಿತೆ ಜಾರಿಯಲ್ಲಿರುವುದರಿಂದ ನ. 10ರ ನಂತರ ಮುಖ್ಯಮಂತ್ರಿ ಜೊತೆ ಈ ಬಗ್ಗೆ ಚರ್ಚಿಸಿ, ಮೀಸಲಾತಿ ಹೆಚ್ಚಿಸುವುದಾಗಿ ಸಚಿವ ಬಿ. ಶ್ರೀರಾಮುಲು ಭರವಸೆ ನೀಡಿದ್ದಾರೆ’ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಹೇಳಿದರು.ಅದಕ್ಕೆ ಪ್ರತಿಕ್ರಿಯಿಸಿದ ಶ್ರೀರಾಮುಲು, ‘ಸರ್ಕಾರ ನೀಡಿರುವ ಭರವಸೆಯನ್ನು ಉಳಿಸಿಕೊಳ್ಳಲಿದೆ. ನೀತಿ-ಸಂಹಿತೆ ಕಾರಣ ಈಗ ಘೋಷಣೆ ಮಾಡುವಂತಿಲ್ಲ’ ಎಂದರು.