<p><strong>ಬೆಂಗಳೂರು: </strong>ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳಿಗೆ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿ ಈ ಸಾಲಿನಲ್ಲಿ ₹ 28234.36 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ವಿಧಾನಸೌಧದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.</p>.<p>ಕಳೆದ ವರ್ಷದ ಅನುದಾನದಲ್ಲಿ ಎಷ್ಟು ಬಳಕೆಯಾಗಿದೆ ಮತ್ತು ಎಷ್ಟು ಬಾಕಿ ಇದೆ ಎನ್ನುವುದನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ಕೆಲವು ಯೋಜನೆಗಳಲ್ಲಿ ಮಾತ್ರ ಬದಲಾವಣೆ ಮಾಡಿ ಉಳಿದವುಗಳಿಗೆ ಅನುಮೋದನೆ ನೀಡಲಾಗಿದೆ. ಬಜೆಟ್ನಲ್ಲಿ ಇದಕ್ಕೆ ಅವಕಾಶಕಲ್ಪಿಸಲಾಗಿತ್ತು, ಪರಿಷತ್ತಿನ ಸಭೆಯಲ್ಲಿಇದಕ್ಕೆ ಒಪ್ಪಿಗೆ ಪಡೆಯಲಾಯಿತು ಎಂದು ಹೇಳಿದರು.</p>.<p>ಸಮಾಜ ಕಲ್ಯಾಣ ಇಲಾಖೆಗೆ ₹ 500 ಕೋಟಿ ಹೆಚ್ಚಿಗೆ ನೀಡಲಾಗಿದೆ. ಕೃಷಿ ಇಲಾಖೆಗೆ ₹ 851 ಕೋಟಿ ಇದ್ದ ಅನುದಾನವನ್ನು ₹1,061 ಕೋಟಿಗೆ ಏರಿಸಲಾಗಿದೆ. ತೋಟಗಾರಿಕೆ ಇಲಾಖೆಗೆ ₹142 ಕೋಟಿ ಇದ್ದ ಅನುದಾನವನ್ನು ₹187 ಕೋಟಿಗೆ ಹೆಚ್ಚಿಸಲಾಗಿದೆ. ಆರೋಗ್ಯ ಇಲಾಖೆಗೆ ಕಳೆದ ವರ್ಷ ₹ 899 ಕೋಟಿ ನೀಡಲಾಗಿತ್ತು. ಈ ವರ್ಷ ₹1,300 ಕೋಟಿಗೆ ಹೆಚ್ಚಿಸಲಾಗಿದೆ ಎಂದು ಬೊಮ್ಮಾಯಿ ವಿವರಿಸಿದರು.</p>.<p>ಸಹಕಾರ ಇಲಾಖೆಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯದ ಜನರಿಗೆ ಸಹಕಾರ ಸಂಘಗಳಲ್ಲಿ ಸದಸ್ಯತ್ವ ನೀಡಲು ₹203 ಕೋಟಿ ಒದಗಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಪಿಂಚಣಿ ಮೊತ್ತ ಹೆಚ್ಚಳ ಮಾಡಿದ್ದು, ಕಳೆದ ವರ್ಷ ₹2,900 ಕೋಟಿ ಇದ್ದ ಅನುದಾನವನ್ನು ಈ ವರ್ಷ ₹3,748 ಕೋಟಿ ಹೆಚ್ಚಿಸಲಾಗಿದೆ. ಕೌಶಲಾಭಿವೃದ್ಧಿಗೆ ₹180 ಕೋಟಿ ಮತ್ತು ಗಂಗಾ ಕಲ್ಯಾಣ ಯೋಜನೆಗೆ ₹9,000 ಕೋಟಿಗೆ ಅನುಮೋದನೆ ನೀಡಲಾಗಿದೆ ಎಂದರು.</p>.<p>ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದ ಸ್ಥಳಗಳ ಅಭಿವೃದ್ಧಿಗೆ ಒಟ್ಟು ₹ 20 ಕೋಟಿ ಮೀಸಲಿಡಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.</p>.<p>ಮಲೆನಾಡು ಅಭಿವೃದ್ಧಿ ಮಂಡಳಿ, ಬಯಲುಸೀಮೆ ಅಭಿವೃದ್ಧಿ ಮಂಡಳಿ ಮತ್ತು ಕರಾವಳಿ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ಕ್ಷೇತ್ರಗಳ ಶಾಸಕರಿಗೆ ತಲಾ ₹ 1 ಕೋಟಿ ನೀಡಲಾಗುವುದು ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿಗಾಗಿ ವಿವಿಧ ಕಾರ್ಯಕ್ರಮಗಳಿಗೆ ಎಸ್ಸಿಎಸ್ಪಿ/ಟಿಎಸ್ಪಿ ಯೋಜನೆಯಡಿ ಈ ಸಾಲಿನಲ್ಲಿ ₹ 28234.36 ಕೋಟಿ ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.</p>.<p>ವಿಧಾನಸೌಧದಲ್ಲಿ ಶುಕ್ರವಾರ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್ತಿನ ಸಭೆಯ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.</p>.<p>ಕಳೆದ ವರ್ಷದ ಅನುದಾನದಲ್ಲಿ ಎಷ್ಟು ಬಳಕೆಯಾಗಿದೆ ಮತ್ತು ಎಷ್ಟು ಬಾಕಿ ಇದೆ ಎನ್ನುವುದನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ಕೆಲವು ಯೋಜನೆಗಳಲ್ಲಿ ಮಾತ್ರ ಬದಲಾವಣೆ ಮಾಡಿ ಉಳಿದವುಗಳಿಗೆ ಅನುಮೋದನೆ ನೀಡಲಾಗಿದೆ. ಬಜೆಟ್ನಲ್ಲಿ ಇದಕ್ಕೆ ಅವಕಾಶಕಲ್ಪಿಸಲಾಗಿತ್ತು, ಪರಿಷತ್ತಿನ ಸಭೆಯಲ್ಲಿಇದಕ್ಕೆ ಒಪ್ಪಿಗೆ ಪಡೆಯಲಾಯಿತು ಎಂದು ಹೇಳಿದರು.</p>.<p>ಸಮಾಜ ಕಲ್ಯಾಣ ಇಲಾಖೆಗೆ ₹ 500 ಕೋಟಿ ಹೆಚ್ಚಿಗೆ ನೀಡಲಾಗಿದೆ. ಕೃಷಿ ಇಲಾಖೆಗೆ ₹ 851 ಕೋಟಿ ಇದ್ದ ಅನುದಾನವನ್ನು ₹1,061 ಕೋಟಿಗೆ ಏರಿಸಲಾಗಿದೆ. ತೋಟಗಾರಿಕೆ ಇಲಾಖೆಗೆ ₹142 ಕೋಟಿ ಇದ್ದ ಅನುದಾನವನ್ನು ₹187 ಕೋಟಿಗೆ ಹೆಚ್ಚಿಸಲಾಗಿದೆ. ಆರೋಗ್ಯ ಇಲಾಖೆಗೆ ಕಳೆದ ವರ್ಷ ₹ 899 ಕೋಟಿ ನೀಡಲಾಗಿತ್ತು. ಈ ವರ್ಷ ₹1,300 ಕೋಟಿಗೆ ಹೆಚ್ಚಿಸಲಾಗಿದೆ ಎಂದು ಬೊಮ್ಮಾಯಿ ವಿವರಿಸಿದರು.</p>.<p>ಸಹಕಾರ ಇಲಾಖೆಯಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ಸಮುದಾಯದ ಜನರಿಗೆ ಸಹಕಾರ ಸಂಘಗಳಲ್ಲಿ ಸದಸ್ಯತ್ವ ನೀಡಲು ₹203 ಕೋಟಿ ಒದಗಿಸಲಾಗಿದೆ. ಕಂದಾಯ ಇಲಾಖೆಯಲ್ಲಿ ಪಿಂಚಣಿ ಮೊತ್ತ ಹೆಚ್ಚಳ ಮಾಡಿದ್ದು, ಕಳೆದ ವರ್ಷ ₹2,900 ಕೋಟಿ ಇದ್ದ ಅನುದಾನವನ್ನು ಈ ವರ್ಷ ₹3,748 ಕೋಟಿ ಹೆಚ್ಚಿಸಲಾಗಿದೆ. ಕೌಶಲಾಭಿವೃದ್ಧಿಗೆ ₹180 ಕೋಟಿ ಮತ್ತು ಗಂಗಾ ಕಲ್ಯಾಣ ಯೋಜನೆಗೆ ₹9,000 ಕೋಟಿಗೆ ಅನುಮೋದನೆ ನೀಡಲಾಗಿದೆ ಎಂದರು.</p>.<p>ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದ ಸ್ಥಳಗಳ ಅಭಿವೃದ್ಧಿಗೆ ಒಟ್ಟು ₹ 20 ಕೋಟಿ ಮೀಸಲಿಡಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.</p>.<p>ಮಲೆನಾಡು ಅಭಿವೃದ್ಧಿ ಮಂಡಳಿ, ಬಯಲುಸೀಮೆ ಅಭಿವೃದ್ಧಿ ಮಂಡಳಿ ಮತ್ತು ಕರಾವಳಿ ಅಭಿವೃದ್ಧಿ ಮಂಡಳಿ ವ್ಯಾಪ್ತಿಯ ಕ್ಷೇತ್ರಗಳ ಶಾಸಕರಿಗೆ ತಲಾ ₹ 1 ಕೋಟಿ ನೀಡಲಾಗುವುದು ಎಂದೂ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>