ಜೆಡಿಎಸ್ನ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ಕೊಡಗು, ಚಿತ್ರದುರ್ಗ ಮತ್ತು ಬೀದರ್ ಜಿಲ್ಲಾ ಸಹಕಾರ ಬ್ಯಾಂಕ್ಗಳಲ್ಲಿ ಚಿನ್ನಾಭರಣದ ಸಾಲ ಪಡೆದ ರೈತರುಪಹಣಿ ನೀಡಿದರೆ, ನಿಗದಿತ ಬಡ್ಡಿಗಿಂತ ಶೇ 1ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ರಾಜ್ಯದಲ್ಲಿರುವ ಇತರ ಡಿಸಿಸಿ ಬ್ಯಾಂಕ್ಗಳಲ್ಲಿಯೂ ಬಡ್ಡಿ ರಿಯಾಯಿತಿ ಮತ್ತು ಏಕರೂಪದ ಬಡ್ಡಿ ದರ ನಿಗದಿಪಡಿಸುವ ಬಗ್ಗೆ ತೀರ್ಮಾನಿಸಲಾಗುವುದು’ ಎಂದು ಭರವಸೆ ನೀಡಿದರು.