<figcaption>""</figcaption>.<p><strong>ಬೆಂಗಳೂರು: </strong>ರಾಜ್ಯದಲ್ಲಿ ಸೋಮವಾರ 70 ಜನ ಸಾವಿಗೀಡಾಗುವುದರೊಂದಿಗೆ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 10 ಸಾವಿರ ದಾಟಿದೆ.</p>.<p>ಹೊಸದಾಗಿ 7,606 ಮಂದಿಗೆ ಸೋಂಕು ದೃಢಪಟ್ಟಿದ್ದು, 12,030 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ. ಒಟ್ಟಾರೆ ಸೋಂಕಿತರ ಸಂಖ್ಯೆ 7,17,915ಕ್ಕೆ ತಲುಪಿದ್ದರೆ, 5,92,084 ಜನ ಕೋವಿಡ್ನಿಂದ ಮುಕ್ತರಾಗಿದ್ದಾರೆ.ಸದ್ಯ ರಾಜ್ಯದಲ್ಲಿ ಮರಣ ದರ ಶೇ.1.4 ರಷ್ಟಿದ್ದು, ಗುಣಮುಖ ದರ ಶೇ. 82.4 ರಷ್ಟಿದೆ.</p>.<p>ಸಕ್ರಿಯ ಪ್ರಕರಣಗಳ ಪೈಕಿ 1,15,776 ಮಂದಿ ಆಸ್ಪತ್ರೆಗಳಲ್ಲಿ, ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದು, 928 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಅ.12ರಂದು ರಾಜ್ಯದಲ್ಲಿ 23,564 ಮಂದಿಗೆ ಆ್ಯಂಟಿಜೆನ್ ಪರೀಕ್ಷೆ ಮತ್ತು 55,193 ಮಂದಿಗೆ ಆರ್ಟಿ–ಪಿಸಿಆರ್ ಪರೀಕ್ಷೆ ಮಾಡಲಾಗಿದ್ದು, ಒಟ್ಟು 78,757 ಮಂದಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಈವರೆಗೆ 60,30,980 ಮಂದಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ.</p>.<p class="Subhead"><strong>ಜಿಲ್ಲಾವಾರು ಮಾಹಿತಿ:</strong></p>.<p>ರಾಜಧಾನಿಯಲ್ಲಿ ಹೊಸದಾಗಿ 3,498 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದರೆ,ಬೆಳಗಾವಿ 444,ಉಡುಪಿ 317, ಮೈಸೂರಿನಲ್ಲಿ 309, ದಕ್ಷಿಣ ಕನ್ನಡದಲ್ಲಿ 303 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.</p>.<p>ಶಿವಮೊಗ್ಗ, ಬೆಳಗಾವಿ ಹಾಗೂ ಹಾಸನ 300ಕ್ಕೂ ಹೆಚ್ಚು, ತುಮಕೂರು, ಕಲಬುರ್ಗಿ ಹಾಗೂ ದಾವಣಗೆರೆಯಲ್ಲಿ 200ಕ್ಕೂ ಹೆಚ್ಚು, 12 ಜಿಲ್ಲೆಗಳಲ್ಲಿ ನೂರಕ್ಕೂ ಹೆಚ್ಚು ಜನ ಕೊರೊನಾದಿಂದ ಸಾವಿಗೀಡಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಬೆಂಗಳೂರು: </strong>ರಾಜ್ಯದಲ್ಲಿ ಸೋಮವಾರ 70 ಜನ ಸಾವಿಗೀಡಾಗುವುದರೊಂದಿಗೆ ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 10 ಸಾವಿರ ದಾಟಿದೆ.</p>.<p>ಹೊಸದಾಗಿ 7,606 ಮಂದಿಗೆ ಸೋಂಕು ದೃಢಪಟ್ಟಿದ್ದು, 12,030 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ತೆರಳಿದ್ದಾರೆ. ಒಟ್ಟಾರೆ ಸೋಂಕಿತರ ಸಂಖ್ಯೆ 7,17,915ಕ್ಕೆ ತಲುಪಿದ್ದರೆ, 5,92,084 ಜನ ಕೋವಿಡ್ನಿಂದ ಮುಕ್ತರಾಗಿದ್ದಾರೆ.ಸದ್ಯ ರಾಜ್ಯದಲ್ಲಿ ಮರಣ ದರ ಶೇ.1.4 ರಷ್ಟಿದ್ದು, ಗುಣಮುಖ ದರ ಶೇ. 82.4 ರಷ್ಟಿದೆ.</p>.<p>ಸಕ್ರಿಯ ಪ್ರಕರಣಗಳ ಪೈಕಿ 1,15,776 ಮಂದಿ ಆಸ್ಪತ್ರೆಗಳಲ್ಲಿ, ಕೋವಿಡ್ ಆರೈಕೆ ಕೇಂದ್ರಗಳು ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದು, 928 ಮಂದಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.</p>.<p>ಅ.12ರಂದು ರಾಜ್ಯದಲ್ಲಿ 23,564 ಮಂದಿಗೆ ಆ್ಯಂಟಿಜೆನ್ ಪರೀಕ್ಷೆ ಮತ್ತು 55,193 ಮಂದಿಗೆ ಆರ್ಟಿ–ಪಿಸಿಆರ್ ಪರೀಕ್ಷೆ ಮಾಡಲಾಗಿದ್ದು, ಒಟ್ಟು 78,757 ಮಂದಿ ಪರೀಕ್ಷೆ ಮಾಡಿಸಿಕೊಂಡಿದ್ದಾರೆ. ಈವರೆಗೆ 60,30,980 ಮಂದಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದಾರೆ.</p>.<p class="Subhead"><strong>ಜಿಲ್ಲಾವಾರು ಮಾಹಿತಿ:</strong></p>.<p>ರಾಜಧಾನಿಯಲ್ಲಿ ಹೊಸದಾಗಿ 3,498 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದರೆ,ಬೆಳಗಾವಿ 444,ಉಡುಪಿ 317, ಮೈಸೂರಿನಲ್ಲಿ 309, ದಕ್ಷಿಣ ಕನ್ನಡದಲ್ಲಿ 303 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.</p>.<p>ಶಿವಮೊಗ್ಗ, ಬೆಳಗಾವಿ ಹಾಗೂ ಹಾಸನ 300ಕ್ಕೂ ಹೆಚ್ಚು, ತುಮಕೂರು, ಕಲಬುರ್ಗಿ ಹಾಗೂ ದಾವಣಗೆರೆಯಲ್ಲಿ 200ಕ್ಕೂ ಹೆಚ್ಚು, 12 ಜಿಲ್ಲೆಗಳಲ್ಲಿ ನೂರಕ್ಕೂ ಹೆಚ್ಚು ಜನ ಕೊರೊನಾದಿಂದ ಸಾವಿಗೀಡಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>