ಕೋವಿಡ್–19 ಅಂಕಿ–ಅಂಶಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಪಾಟೀಲ, ಕೋವಿಡ್–19ನಿಂದಾಗಿ ರಾಜ್ಯದಲ್ಲಿ ಮೃತಪಡುತ್ತಿರುವವರ ಪ್ರಮಾಣವು ದೇಶಕ್ಕಿಂತಲು ಹೆಚ್ಚಾಗಿದೆ. ರಾಜ್ಯದಲ್ಲಿ ಸಾವಿನ ಪ್ರಮಾಣ ಪ್ರತಿ ಹತ್ತು ಲಕ್ಷಕ್ಕೆ 83 ಇದೆ. ದೇಶದಲ್ಲಿ ಈ ಪ್ರಮಾಣ 42 ಆಗಿದೆ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಿ. ಬೆಂಗಳೂರಿನಲ್ಲಿ ಜನವರಿ–ಜುಲೈ ಅವಧಿಯಲ್ಲಿ ಸಾವಿನ ಪ್ರಮಾಣ ಶೇ.32 ರಷ್ಟು ಹೆಚ್ಚಾಗಿದೆ ಎಂಬುದು ನೆನಪಿರಲಿ ಎಂದು ಎಚ್ಚರಿಸಿದ್ದಾರೆ.