ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾಲಿ ಕುರ್ಚಿಗಳನ್ನು ತುಂಬಿಸಲು ರೋಗಿಗಳನ್ನು ಕರೆ ತಂದ ಸರ್ಕಾರ: ಕಾಂಗ್ರೆಸ್ ಕಿಡಿ

Last Updated 5 ಡಿಸೆಂಬರ್ 2022, 11:56 IST
ಅಕ್ಷರ ಗಾತ್ರ

ಬೆಂಗಳೂರು: ಶಿಗ್ಗಾವಿಯಲ್ಲಿ ನಡೆದ ಸರ್ಕಾರದ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿರಲಿಲ್ಲ. ಆದರೆ, ಖಾಲಿ ಕುರ್ಚಿಗಳನ್ನು ತುಂಬಿಸಲು ಸರ್ಕಾರವು ಆಸ್ಪತ್ರೆಗೆ ರೋಗಿಗಳನ್ನು ಬಲವಂತವಾಗಿ ಕರೆ ತಂದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಗಳಿಂದ 250 ಹಾಸಿಗೆಗಳಿಗೆ ಮೇಲ್ದರ್ಜೆಗೇರಿಸುವ ಕಟ್ಟಡ ಕಾಮಗಾರಿಯ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ನೆರವೇರಿಸಿದ್ದರು.

ಕಾರ್ಯಕ್ರಮದಲ್ಲಿ ರೋಗಿಗಳು ಕುಳಿತಿರುವ ದೃಶ್ಯಗಳು ಮಾಧ್ಯಮಗಳಲ್ಲಿ ಹರಿದಾಡಿವೆ. ಗ್ಲೂಕೋಸ್ ಅಥವಾ ಔಷಧ ನೀಡಲು ರೋಗಿಗಳ ಚುಚ್ಚಿದ್ದ ಸೂಜಿಗಳೂ ರೋಗಿಗಳ ಕೈಯಲ್ಲಿ ಇರುವುದು ವಿಡಿಯೊಗಳಲ್ಲಿ ಸೆರೆಯಾಗಿದೆ.

ಅದರ ತುಣುಕೊಂದನ್ನು ಹಂಚಿಕೊಂಡಿರುವ ಕಾಂಗ್ರೆಸ್‌,ಖಾಲಿ ಕುರ್ಚಿಗಳನ್ನು ತುಂಬಿಸಲು ಸರ್ಕಾರವು ಅತ್ಯಂತ ಅಮಾನವೀಯ ಹಾಗೂ ಕೀಳು ಹಂತಕ್ಕೆ ಇಳಿದಿದೆ.ಆಸ್ಪತ್ರೆ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ಬಲವಂತವಾಗಿ ಕರೆತಂದಿದ್ದೀರಲ್ಲ ಬಸವರಾಜ ಬೊಮ್ಮಾಯಿ ಅವರೇ,ನಿಮಗೆ ಕನಿಷ್ಠ ಮಾನವೀಯತೆ, ಅಂತಃಕರಣ ಇಲ್ಲದಾಯಿತೆ?ಖಾಲಿ ಕುರ್ಚಿಗಳು ನಿಮ್ಮನ್ನು ಆ ಪರಿ ಕಂಗೆಡಿಸಿದೆಯೇ? ಎಂದು ಪ್ರಶ್ನಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT