ಬೆಂಗಳೂರು: ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರಸ್ವಾಮೀಜಿ ಅವರು ಲಿಂಗೈಕ್ಯರಾದ ಜನವರಿ 21ರಂದುರಾಜ್ಯದಾದ್ಯಂತ ‘ದಾಸೋಹ ದಿನ’ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ, ಈ ಸಂಬಂಧ ರೂಪುರೇಷೆ ಸಿದ್ಧಪಡಿಸಿಕೊಳ್ಳಲು ಆದೇಶ ಹೊರಡಿಸಿದೆ.
ದಾಸೋಹ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲು ಸಂಬಂಧಪಟ್ಟ ಇಲಾಖೆಗಳು ಸಿದ್ಧತೆ ಮಾಡಿಕೊಂಡು ಕಾರ್ಯಕ್ರಮ ಜಾರಿಗೊಳಿಸಲು ಅಗತ್ಯ ಕ್ರಮ ವಹಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ.