ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ 4–5 ತಿಂಗಳ ಹಿಂದೆ ಖರೀದಿ ಮಾಡಿದ್ದ ರಾಗಿ, ಭತ್ತ ಮತ್ತು ಗೋಧಿಯ ಬಾಕಿ ₹770 ಕೋಟಿಯನ್ನು ಬಿಡುಗಡೆ ಮಾಡಿ ರಾಜ್ಯ ಸರ್ಕಾರ ಶುಕ್ರವಾರ ರಾತ್ರಿ ಆದೇಶ ಹೊರಡಿಸಿದೆ.
ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದಿದ್ದ ಸಂಪುಟ ಉಪಸಮಿತಿ ಸಭೆಯಲ್ಲಿ ಹಣ ಬಿಡುಗಡೆಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು.