ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಡಿ.ಆರ್. ರವಿಶಂಕರ್, ‘ಈ ಬಾರಿಯ ವೃತ್ತಿಪರ ಕೋರ್ಸ್ಗಳ ಪ್ರವೇಶಾತಿಗೆ 2021–2022ನೇ ಶೈಕ್ಷಣಿಕ ವರ್ಷದ ದ್ವಿತೀಯ ಪಿಯು ಅಂಕಗಳು ಅನ್ವಯ ಆಗುವುದಿಲ್ಲ ಎಂದು ಕೆಇಎ ಹೇಳಿದೆ. ಸರ್ಕಾರ ಈ ಕುರಿತಂತೆ ಕಾಯ್ದೆಗೆ ತಿದ್ದುಪಡಿ ಮಾಡದೇ ಆದೇಶ ಜಾರಿಗೆ ಮುಂದಾಗಿದೆ. ಈಗಾಗಲೇ ಪರೀಕ್ಷೆಗಳೆಲ್ಲಾ ಮುಗಿದಿದ್ದು, ಫಲಿತಾಂಶ ಪ್ರಕಟವಾಗಿರುವಾಗ ಕೆಇಎ ತನ್ನ ನಿಯಮ ಬದಲಿಸಲು ಆಗದು. ಆದ್ದರಿಂದ, 2020–21, 2021–22ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಪಡೆದಿರುವ ಅಂಕಗಳನ್ನು ಆಧರಿಸಿ ರ್ಯಾಂಕ್ ಪ್ರಕಟಿಸಬೇಕು’ ಎಂದು ಕೋರಿದರು.