<p><strong>ಬೆಂಗಳೂರು:</strong> ಎಲ್ಲ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.</p>.<p>ರಾಜ್ಯದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ, ನಿಧಿಗೆ ವೇತನವನ್ನು ದೇಣಿಗೆ ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ (ಡಿಪಿಎಆರ್) ಮೇ 3ರಂದು ಸೂಚಿಸಿದ್ದರು.</p>.<p>ಈ ಮೇ 1ರಿಂದ ಅನ್ವಯಿಸುವಂತೆ ಸಚಿವರ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ಪಾವತಿಸಿ ಆದೇಶ ಹೊರಡಿಸಲಾಗಿದೆ.</p>.<p><strong>ಗೃಹ ಸಚಿವರ ಮನೆ ಆವರಣದಲ್ಲಿ ಆರೈಕೆ ಕೇಂದ್ರ<br />ಶಿಗ್ಗಾವಿ:</strong> ಕೋವಿಡ್ ಪೀಡಿತರ ಪ್ರಾಥಮಿಕ ಚಿಕಿತ್ಸೆಗಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಇಲ್ಲಿನ ಮನೆಯ ಆವರಣದಲ್ಲಿ 50 ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರ ಸ್ಥಾಪಿಸಲಾಗಿದೆ.</p>.<p>‘ಚಿಕಿತ್ಸೆ ನೀಡಲು ಈಗಾಗಲೇ ವೈದ್ಯರನ್ನೂ ನಿಯೋಜಿಸಲಾಗಿದೆ. ರೋಗಿಗಳು ಬಂದ ತಕ್ಷಣ ಚಿಕಿತ್ಸೆ ಆರಂಭಿಸುವ ಎಲ್ಲ ವ್ಯವಸ್ಥೆ ಮಾಡಲಾಗಿದೆ’ ಎಂದು ಗುರುವಾರ ಈ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಎಲ್ಲ ಸಚಿವರ ಒಂದು ವರ್ಷದ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.</p>.<p>ರಾಜ್ಯದಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ, ನಿಧಿಗೆ ವೇತನವನ್ನು ದೇಣಿಗೆ ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ (ಡಿಪಿಎಆರ್) ಮೇ 3ರಂದು ಸೂಚಿಸಿದ್ದರು.</p>.<p>ಈ ಮೇ 1ರಿಂದ ಅನ್ವಯಿಸುವಂತೆ ಸಚಿವರ ವೇತನವನ್ನು ಕೋವಿಡ್ ಪರಿಹಾರ ನಿಧಿಗೆ ಪಾವತಿಸಿ ಆದೇಶ ಹೊರಡಿಸಲಾಗಿದೆ.</p>.<p><strong>ಗೃಹ ಸಚಿವರ ಮನೆ ಆವರಣದಲ್ಲಿ ಆರೈಕೆ ಕೇಂದ್ರ<br />ಶಿಗ್ಗಾವಿ:</strong> ಕೋವಿಡ್ ಪೀಡಿತರ ಪ್ರಾಥಮಿಕ ಚಿಕಿತ್ಸೆಗಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಇಲ್ಲಿನ ಮನೆಯ ಆವರಣದಲ್ಲಿ 50 ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರ ಸ್ಥಾಪಿಸಲಾಗಿದೆ.</p>.<p>‘ಚಿಕಿತ್ಸೆ ನೀಡಲು ಈಗಾಗಲೇ ವೈದ್ಯರನ್ನೂ ನಿಯೋಜಿಸಲಾಗಿದೆ. ರೋಗಿಗಳು ಬಂದ ತಕ್ಷಣ ಚಿಕಿತ್ಸೆ ಆರಂಭಿಸುವ ಎಲ್ಲ ವ್ಯವಸ್ಥೆ ಮಾಡಲಾಗಿದೆ’ ಎಂದು ಗುರುವಾರ ಈ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಚಿವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>