ಬಸವಣ್ಣ, ನಾರಾಯಣ ಗುರುಗಳು, ಕುವೆಂಪು ಮತ್ತು ಸ್ವಾತಂತ್ರ್ಯ ಹೋರಾಟಗಾರನ್ನು ಅವಮಾನಿಸಿರುವ, ನಾಡಗೀತೆಯನ್ನು ತಿರುಚಿರುವ ಆರೋಪ ಎದುರಿಸುತ್ತಿರುವ ವ್ಯಕ್ತಿಯ ಪರವಾಗಿ ನಿಲ್ಲುವ ಮೂಲಕ ಮುಖ್ಯಮಂತ್ರಿಯವರು ಇಡೀ ಸರ್ಕಾರದ ಜಂಘಾಬಲ ಕುಸಿಯುವಂತೆ ಮಾಡಿದ್ದಾರೆ. ಕುವೆಂಪು ಮತ್ತು ನಾಡಗೀತೆಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷನೇ ಅವಮಾನಿಸಿರುವುದಕ್ಕೆ ಸಾಕ್ಷ್ಯಗಳಿವೆ. ಆ ವ್ಯಕ್ತಿಯನ್ನು ಬಂಧಿಸಬೇಕಲ್ಲವೆ ಎಂದು ಪ್ರಶ್ನಿಸಿದ್ದಾರೆ.