‘ಅಲ್ಪಸಂಖ್ಯಾತ ಸಮುದಾಯಗಳ ಕಲ್ಯಾಣ, ಅಭಿವೃದ್ಧಿ, ಸಮುದಾಯ ಭವನ ನಿರ್ಮಾಣ, ದುರಸ್ತಿ, ನವೀಕರಣ, ವಸತಿ ಸಹಿತ ಮತ್ತು ವಸತಿ ರಹಿತ ಶಾಲೆಗಳ ಆರಂಭ, ಹಾಸ್ಟೆಲ್ ನಿರ್ಮಾಣ, ಚರ್ಚ್, ಗುರುದ್ವಾರ, ಜೈನ ಬಸದಿಗಳ ದುರಸ್ತಿ ಕಾರ್ಯ ಮತ್ತು ಅನಾಥಾಶ್ರಮಗಳಿಗೆ ಹಣಕಾಸು ನೆರವು ಕಲ್ಪಿಸುವುದನ್ನು ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯವೇನೋಡಿಕೊಳ್ಳುತ್ತದೆ. ಒಂದು ವೇಳೆ ಅಲ್ಪಸಂಖ್ಯಾತ ಸಮುದಾಯಗಳ ಕುರಿತು ಸೂಕ್ತ ಹಾಗೂ ಸಂಪೂರ್ಣ ಮಾಹಿತಿ ಇಲ್ಲದಿದ್ದರೆ ಅವುಗಳಿಗೆ ಹಣ ಮೀಸಲಿಡಲು ಮತ್ತು ಬಜೆಟ್ನಲ್ಲಿ ರೂಪಿಸಿದ ಕಾರ್ಯಕ್ರಮಗಳನ್ನು ಜಾರಿಗೊಳಿಸಲು ಸಾಧ್ಯವಾಗುವುದಿಲ್ಲ’ ಎಂದು ವಿವರಿಸಲಾಗಿದೆ.