<p><strong>ಉಡುಪಿ: </strong>ಫೆ.11, 12ರಂದು ಉಡುಪಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣ ಮಾಡಲು ಲೇಖಕ ರೋಹಿತ್ ಚಕ್ರತೀರ್ಥರಿಗೆ ಅವಕಾಶ ನೀಡಿರುವುದಕ್ಕೆ ಆಕ್ಷೇಪಗಳು ವ್ಯಕ್ತವಾಗಿವೆ.</p>.<p>‘ಯಾವ ಮಾನದಂಡದ ಆಧಾರದಲ್ಲಿ ರೋಹಿತ್ ಚಕ್ರತೀರ್ಥರಿಗೆ ಗೋಷ್ಠಿಗಳ ದಿಕ್ಸೂಚಿ ಭಾಷಣದ ಹೊಣೆಗಾರಿಕೆ ನೀಡಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿರಿಯ ಯಕ್ಷಗಾನ ಕಲಾವಿದರು ಇಲ್ಲವೇ’ ಎಂದು ರಂಗಕರ್ಮಿ ಉದ್ಯಾವರ ನಾಗೇಶ್ ಕುಮಾರ್ ಪ್ರಶ್ನಿಸಿದ್ದಾರೆ.</p>.<p>ಕೊಳ್ಯೂರು ರಾಮಚಂದ್ರ ರಾಯರು, ಶ್ರೀಧರ ಹಂದೆ, ಗೋವಿಂದ ಭಟ್ಟರಂತಹ ದಿಗ್ಗಜರನ್ನು ಬಿಟ್ಟು ರೋಹಿತ್ ಚಕ್ರತೀರ್ಥಗೆ ಮಣೆ ಹಾಕುವ ಔಚಿತ್ಯವಾದರೂ ಏನಿತ್ತು. ಇದು ಯಕ್ಷಗಾನ ಸಮ್ಮೇಳನವೇ ಅಥವಾ ರಾಜಕೀಯ ಸಮ್ಮೇಳನವೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಈಚೆಗೆ ನಡೆದ ಮಲ್ಪೆ ಬೀಚ್ ಉತ್ಸವ ಹಾಗೂ ಪರಶುರಾಮ ಥೀಂ ಪಾರ್ಕ್ ಉದ್ಘಾಟನಾ ಕಾರ್ಯಕ್ರಮವನ್ನು ಅಟಲ್ ಉತ್ಸವದಂತೆ ಆಚರಿಸಲಾಗಿದೆ. ಸರ್ಕಾರಿ ಕಾರ್ಯಕ್ರಮಗಳನ್ನು ಬಿಜೆಪಿಯ ತತ್ವ–ಸಿದ್ಧಾಂತಗಳನ್ನು ಪ್ರಚಾರ ಮಾಡುವ ವೇದಿಕೆಯಾಗಿ ಬಳಸಲಾಗುತ್ತಿದೆ. ಸಾಂಸ್ಕೃತಿಕ ರಂಗವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.</p>.<p>ಉಡುಪಿ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಯಾಗಿ ರೋಹಿತ್ ಚಕ್ರತೀರ್ಥ ಹೆಸರು ಮುನ್ನಲೆಗೆ ಬಂದಿದ್ದು, ಅವರನ್ನು ಸಮಾಧಾನಗೊಳಿಸಲು ಗೋಷ್ಠಿಯಲ್ಲಿ ದಿಕ್ಸೂಚಿ ಭಾಷಣ ಮಾಡುವ ಅವಕಾಶ ನೀಡಲಾಗಿದೆ ಎಂಬ ಸಂಶಯ ಕಾಡುತ್ತಿದೆ.</p>.<p>ಉಡುಪಿಯಲ್ಲಿ ರಾಜ್ಯಮಟ್ಟದ ಪ್ರಥಮ ಯಕ್ಷಗಾನ ಸಮ್ಮೇಳನ ನಡೆಯುತ್ತಿರುವುದು ಸಾಂಸ್ಕೃತಿಕ ವಲಯದಲ್ಲಿ ಸಂತಸ ತಂದಿದೆ. ಆದರೆ, ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ನೋಡಿದಾಗ ರಾಜಕೀಯ ಸಮ್ಮೇಳನದಂತೆ ಭಾಸವಾಗುತ್ತಿದೆ ಎಂದು ಉದ್ಯಾವರ ನಾಗೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದರು.</p>.<p>ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಇತಿಹಾಸವನ್ನು ತಿರುಚಿರುವ ರೋಹಿತ್ ಚಕ್ರತೀರ್ಥರನ್ನು ದಿಕ್ಸೂಚಿ ಭಾಷಣಕ್ಕೆ ಆಹ್ವಾನಿಸಿರುವುದು ಮತ್ತೊಂದು ಗೊಂದಲ ಸೃಷ್ಟಿಗೆ ಕಾರಣವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಫೆ.11, 12ರಂದು ಉಡುಪಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ಸಮಗ್ರ ಯಕ್ಷಗಾನ ಸಮ್ಮೇಳನದ ಗೋಷ್ಠಿಗಳ ಉದ್ಘಾಟನೆ ಹಾಗೂ ದಿಕ್ಸೂಚಿ ಭಾಷಣ ಮಾಡಲು ಲೇಖಕ ರೋಹಿತ್ ಚಕ್ರತೀರ್ಥರಿಗೆ ಅವಕಾಶ ನೀಡಿರುವುದಕ್ಕೆ ಆಕ್ಷೇಪಗಳು ವ್ಯಕ್ತವಾಗಿವೆ.</p>.<p>‘ಯಾವ ಮಾನದಂಡದ ಆಧಾರದಲ್ಲಿ ರೋಹಿತ್ ಚಕ್ರತೀರ್ಥರಿಗೆ ಗೋಷ್ಠಿಗಳ ದಿಕ್ಸೂಚಿ ಭಾಷಣದ ಹೊಣೆಗಾರಿಕೆ ನೀಡಲಾಗಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿರಿಯ ಯಕ್ಷಗಾನ ಕಲಾವಿದರು ಇಲ್ಲವೇ’ ಎಂದು ರಂಗಕರ್ಮಿ ಉದ್ಯಾವರ ನಾಗೇಶ್ ಕುಮಾರ್ ಪ್ರಶ್ನಿಸಿದ್ದಾರೆ.</p>.<p>ಕೊಳ್ಯೂರು ರಾಮಚಂದ್ರ ರಾಯರು, ಶ್ರೀಧರ ಹಂದೆ, ಗೋವಿಂದ ಭಟ್ಟರಂತಹ ದಿಗ್ಗಜರನ್ನು ಬಿಟ್ಟು ರೋಹಿತ್ ಚಕ್ರತೀರ್ಥಗೆ ಮಣೆ ಹಾಕುವ ಔಚಿತ್ಯವಾದರೂ ಏನಿತ್ತು. ಇದು ಯಕ್ಷಗಾನ ಸಮ್ಮೇಳನವೇ ಅಥವಾ ರಾಜಕೀಯ ಸಮ್ಮೇಳನವೇ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.</p>.<p>ಈಚೆಗೆ ನಡೆದ ಮಲ್ಪೆ ಬೀಚ್ ಉತ್ಸವ ಹಾಗೂ ಪರಶುರಾಮ ಥೀಂ ಪಾರ್ಕ್ ಉದ್ಘಾಟನಾ ಕಾರ್ಯಕ್ರಮವನ್ನು ಅಟಲ್ ಉತ್ಸವದಂತೆ ಆಚರಿಸಲಾಗಿದೆ. ಸರ್ಕಾರಿ ಕಾರ್ಯಕ್ರಮಗಳನ್ನು ಬಿಜೆಪಿಯ ತತ್ವ–ಸಿದ್ಧಾಂತಗಳನ್ನು ಪ್ರಚಾರ ಮಾಡುವ ವೇದಿಕೆಯಾಗಿ ಬಳಸಲಾಗುತ್ತಿದೆ. ಸಾಂಸ್ಕೃತಿಕ ರಂಗವನ್ನು ರಾಜಕೀಯಗೊಳಿಸಲಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.</p>.<p>ಉಡುಪಿ ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿಯಾಗಿ ರೋಹಿತ್ ಚಕ್ರತೀರ್ಥ ಹೆಸರು ಮುನ್ನಲೆಗೆ ಬಂದಿದ್ದು, ಅವರನ್ನು ಸಮಾಧಾನಗೊಳಿಸಲು ಗೋಷ್ಠಿಯಲ್ಲಿ ದಿಕ್ಸೂಚಿ ಭಾಷಣ ಮಾಡುವ ಅವಕಾಶ ನೀಡಲಾಗಿದೆ ಎಂಬ ಸಂಶಯ ಕಾಡುತ್ತಿದೆ.</p>.<p>ಉಡುಪಿಯಲ್ಲಿ ರಾಜ್ಯಮಟ್ಟದ ಪ್ರಥಮ ಯಕ್ಷಗಾನ ಸಮ್ಮೇಳನ ನಡೆಯುತ್ತಿರುವುದು ಸಾಂಸ್ಕೃತಿಕ ವಲಯದಲ್ಲಿ ಸಂತಸ ತಂದಿದೆ. ಆದರೆ, ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ನೋಡಿದಾಗ ರಾಜಕೀಯ ಸಮ್ಮೇಳನದಂತೆ ಭಾಸವಾಗುತ್ತಿದೆ ಎಂದು ಉದ್ಯಾವರ ನಾಗೇಶ್ ಕುಮಾರ್ ಬೇಸರ ವ್ಯಕ್ತಪಡಿಸಿದರು.</p>.<p>ಪಠ್ಯ ಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಇತಿಹಾಸವನ್ನು ತಿರುಚಿರುವ ರೋಹಿತ್ ಚಕ್ರತೀರ್ಥರನ್ನು ದಿಕ್ಸೂಚಿ ಭಾಷಣಕ್ಕೆ ಆಹ್ವಾನಿಸಿರುವುದು ಮತ್ತೊಂದು ಗೊಂದಲ ಸೃಷ್ಟಿಗೆ ಕಾರಣವಾಗಲಿದೆ ಎಂದು ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಟೀಕಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>