ಬೆಂಗಳೂರು: ಕೇಂದ್ರ ಅಧಿಕಾರಿಗಳ ತಂಡ ಬೆಂಗಳೂರಿನ ಮಹದೇವಪುರಕ್ಕೆ ಭೇಟಿ ನೀಡಿತು. ಆ ಬಳಿಕ ಒಂದು ತಂಡವು ಹೆಲಿಕಾಪ್ಟರ್ ಮೂಲಕ ರಾಮನಗರ, ಮಂಡ್ಯ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಕಾರವಾರಕ್ಕೂ, ಎರಡನೇ ತಂಡ ಚಿತ್ರದುರ್ಗ, ಚಿಕ್ಕಮಗಳೂರು, ಮೂರನೇ ತಂಡ ಬೀದರ್ ಮತ್ತು ಕಲಬುರಗಿಗೂ ತೆರಳಿದವು.
ತಂಡದಲ್ಲಿ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶೀಶ್ ಕುಮಾರ್, ಕೇಂದ್ರಹಣಕಾಸು ಇಲಾಖೆ ಉಪಕಾರ್ಯದರ್ಶಿ ಮಹೇಶ್ ಕುಮಾರ್, ಇಂಧನ ಇಲಾಖೆ ಸಹಾಯಕ ನಿರ್ದೇಶಕ ಭಾವ್ಯ ಪಾಂಡೆ, ಜಲಶಕ್ತಿ ಸಚಿವಾಲಯದ ಅಶೋಕ್ ಕುಮಾರ್, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಎಕ್ಸಿಕ್ಯೂಟಿವ್ ಎಂಜಿನಿಯರ್ ವಿ.ವಿ.ಶಾಸ್ತ್ರಿ, ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯ ನಿರ್ದೇಶಕ ಡಾ. ಕೆ. ಮನೋಹರನ್,ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧೀನ ಕಾರ್ಯದರ್ಶಿ ಎಸ್.ಬಿ. ತಿವಾರಿ ಇದ್ದಾರೆ.