ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮಣ್ಣ ಪರ ಹೇಳಿಕೆ: ಟಿ.ಬಿ. ಬಳಗಾವಿ ನೋಟಿಸ್‌

Last Updated 5 ಸೆಪ್ಟೆಂಬರ್ 2022, 22:51 IST
ಅಕ್ಷರ ಗಾತ್ರ

ಬೆಂಗಳೂರು: ಕುರುಬ ಸಮಾಜದ ಮುಖಂಡ ಸಿದ್ದರಾಮಯ್ಯ ವಿರುದ್ಧ, ಸಚಿವ ವಿ.ಸೋಮಣ್ಣ ಪರ ಹೇಳಿಕೆ ನೀಡಿದ ಕರ್ನಾಟಕ ಪ್ರದೇಶ ಕುರುಬರ ಸಂಘದ ನಿರ್ದೇಶಕ ಟಿ.ಬಿ. ಬಳಗಾವಿ ಅವರಿಗೆ ಸಂಘ ನೋಟಿಸ್‌ ನೀಡಿದೆ.

ಸೆ.2ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಬಳಗಾವಿ ಅವರು ಸೋಮಣ್ಣ ಅವರ ಬಳಿ ಕ್ಷಮೆಯಾಚಿಸು ವಂತೆ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದರು. ಬೈಲಾ ಪ್ರಕಾರ ಸ್ವಾಯತ್ತ ಸಂಸ್ಥೆಯಾಗಿರುವ ಸಂಘ ಯಾವುದೇ ಪಕ್ಷದ ಜತೆ ಗುರುತಿಸಿಕೊಳ್ಳುವಂತಿಲ್ಲ. ಆದರೆ, ನಿರ್ದೇಶಕ ಬಳಗಾವಿ ಅವರು ಅನುಮತಿ ಪಡೆ ಯದೇ ಒಂದು ಒಂದು ಪಕ್ಷದ ನಾಯಕರ ಪರ ಹೇಳಿಕೆ ನೀಡಿದ್ದಾರೆ. ಸಮಾಜದ ಮುಖಂಡ ಸಿದ್ದರಾಮಯ್ಯ ಅವರನ್ನುಟೀಕಿಸಿದ್ದಾರೆ. ಹಾಗಾಗಿ, ನಿರ್ದೇಶಕ ಸ್ಥಾನದಿಂದ ಏಕೆ ವಜಾಗೊಳಿಸಬಾರದು ಎಂದು ಕಾರಣ ಕೇಳಿ ನೋಟಿಸ್‌ ನೀಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಡಿ. ವೆಂಕೇಶ್‌ ಮೂರ್ತಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.

‘ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಬಳಗಾವಿ ಅವರು ಹೇಳಿಕೆ ನೀಡಿರುವುನ್ನು ಕರ್ನಾಟಕ ಪ್ರದೇಶ ಕುರುಬರ ಸಂಘ ತೀವ್ರವಾಗಿ ಖಂಡಿಸುತ್ತದೆ. ಟಿ.ಬಿ. ಬಳಗಾವಿ ಅವರು ಮೂರು ದಿನಗಳೊಳಗೆ ಕ್ಷಮೆಯಾಚಿಸ ಬೇಕು. ಇಲ್ಲದಿದ್ದರೆ ಪ್ರತಿಭಟನೆ ಮಾಡ ಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT