ಸೆ.2ರಂದು ನಡೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಬಳಗಾವಿ ಅವರು ಸೋಮಣ್ಣ ಅವರ ಬಳಿ ಕ್ಷಮೆಯಾಚಿಸು ವಂತೆ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದರು. ಬೈಲಾ ಪ್ರಕಾರ ಸ್ವಾಯತ್ತ ಸಂಸ್ಥೆಯಾಗಿರುವ ಸಂಘ ಯಾವುದೇ ಪಕ್ಷದ ಜತೆ ಗುರುತಿಸಿಕೊಳ್ಳುವಂತಿಲ್ಲ. ಆದರೆ, ನಿರ್ದೇಶಕ ಬಳಗಾವಿ ಅವರು ಅನುಮತಿ ಪಡೆ ಯದೇ ಒಂದು ಒಂದು ಪಕ್ಷದ ನಾಯಕರ ಪರ ಹೇಳಿಕೆ ನೀಡಿದ್ದಾರೆ. ಸಮಾಜದ ಮುಖಂಡ ಸಿದ್ದರಾಮಯ್ಯ ಅವರನ್ನುಟೀಕಿಸಿದ್ದಾರೆ. ಹಾಗಾಗಿ, ನಿರ್ದೇಶಕ ಸ್ಥಾನದಿಂದ ಏಕೆ ವಜಾಗೊಳಿಸಬಾರದು ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಡಿ. ವೆಂಕೇಶ್ ಮೂರ್ತಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ವಿವರ ನೀಡಿದರು.