’ತನಿಖೆಯ ಆದೇಶ ಪ್ರಶ್ನಿಸಿ ಅರ್ಜಿದಾರರು 2018ರಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ (ಕೆಎಟಿ) ಮಾನ್ಯ ಮಾಡಿ, ಅರ್ಜಿದಾರರ ವಿರುದ್ಧದ ತನಿಖೆ ರದ್ದುಪಡಿಸಿದೆ. ಈ ಆದೇಶವನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿಲ್ಲ. ದೋಷಾರೋಪಣೆ ಪಟ್ಟಿಯಲ್ಲಿ ನಿವೃತ್ತ ಐಪಿಎಸ್ ಅಧಿಕಾರಿ ಎಚ್.ಎನ್. ಸತ್ಯನಾರಾಯಣ ರಾವ್ ಅವರ ವಿರುದ್ಧ ಮಾತ್ರವೇ ಆರೋಪಗಳಿವೆ. ಅನಿತಾ ಅವರ ವಿರುದ್ಧ ಆರೋಪಗಳಿಲ್ಲ. ಹಾಗಿದ್ದೂ, ಅನಿತಾ ಅವರ ವಿರುದ್ಧವೂ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿ 2021ರ ಡಿಸೆಂಬರ್ 30ರಂದು ಆದೇಶ ಹೊರಡಿಸಲಾಗಿದೆ. ಆದ್ದರಿಂದ, ಅರ್ಜಿದಾರರ ಕೋರಿಕೆಯಂತೆ ಮುಂದಿನ ವಿಚಾರಣೆವರೆಗೆ ವಿಚಾರಣೆಯ ಆದೇಶಕ್ಕೆ ತಡೆ ನೀಡಲಾಗಿದೆ‘ ಎಂದು ನ್ಯಾಯಪೀಠ ತಿಳಿಸಿದೆ.