ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಆಗಿರುವ ಬೆಳೆ ಹಾನಿ ಪರಿಹಾರಕ್ಕೆ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಬಳಿ ₹685 ಕೋಟಿ ಹಣವಿದ್ದು, ಅನುದಾನ ಬಳಸಿಕೊಳ್ಳಲು ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಕೇಂದ್ರ ತಂಡ ಬಂದು ಸಮೀಕ್ಷೆ ನಡೆಸಿದ ನಂತರ ಹೆಚ್ಚಿನ ಪರಿಹಾರ ದೊರಕಲಿದೆ ಎಂದು ಹೇಳಿದರು. ಹಾನಿ ವಿವರಗಳನ್ನು ದಾಖಲಿಸುವ ಮೂಲಕ ಪರಿಹಾರ ಪಡೆಯಬಹುದಾಗಿದೆ ಎಂದರು.