ನಾನಿನ್ನೂ ಜೆಡಿಎಸ್ನಲ್ಲೇ ಇದ್ದೇನೆ: ವೈ.ಎಸ್.ವಿ ದತ್ತ
ಕಡೂರು: ‘ಕಾಂಗ್ರೆಸ್ಗೆ ಸೇರ್ಪಡೆಯಾಗುತ್ತಿದ್ದೇನೆ ಎಂಬ ವರದಿಗಳು ಸತ್ಯವಲ್ಲ. ನಾನಿನ್ನೂ ಜೆಡಿಎಸ್ ನಲ್ಲಿಯೇ ಇದ್ದೇನೆ. ಮುಂದೆಯೂ ಇರುತ್ತೇನೆ’ ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ತಿಳಿಸಿದರು.
‘ಪ್ರಜಾವಾಣಿ’ಗೆ ದೂರವಾಣಿಯಲ್ಲಿ ಪ್ರತಿಕ್ರಿಯಿಸಿದ ಅವರು, ‘ಜೆಡಿಎಸ್ ತೊರೆಯುವಂತಹ ಜರೂರತ್ತು ನನಗಿಲ್ಲ. ಸೋಮವಾರವೂ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆ. ಬರಲಿರುವ ಗ್ರಾಮ ಪಂಚಾಯಿತಿ ಚುನಾವಣೆಗಳ ಸಿದ್ಧತೆಗಾಗಿ ಕಡೂರಿನಲ್ಲಿ ಪೂರ್ವಭಾವಿ ಸಭೆಗಳನ್ನು ಮಾಡಬೇಕಿದೆ. ಸದ್ಯಕ್ಕೆ ಪಕ್ಷ ಸಂಘಟನೆಯೇ ಪ್ರಮುಖವಾಗಿದ್ದು, ಬೇರೆ ಪಕ್ಷ ಸೇರುವ ಆಲೋಚನೆ ಮಾಡಿಲ್ಲ. ನನ್ನ ತಲೆಯಲ್ಲಿ ಈ ಆಲೋಚನೆ ಬಂದಿಲ್ಲ. ಪಕ್ಷದ ಕಾರ್ಯಕರ್ತರು ಇದರ ಬಗ್ಗೆ ಹೆಚ್ಚಿನ ಗಮನ ಕೊಡದೆ, ಪಕ್ಷದ ಸಂಘಟನೆಗೆ ಒತ್ತು ನೀಡಬೇಕು’ ಎಂದರು.
ನೆನ್ನೆ ರಾತ್ರಿ ತಾನೆ ದೇವೇಗೌಡರ ಮನೆಗೆ ಹೋಗಿ ಅವರ ಆರೋಗ್ಯ ವಿಚಾರಿಸಿಕೊಂಡು ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳ ಬಗ್ಗೆ ಮಾತನಾಡಿಕೊಂಡು ಬಂದಿದ್ದೇನೆ. ನನ್ನ ತಲೆಯಲ್ಲಿ ಇದುವರೆಗೂ ಬಂದಿಲ್ಲದ ಆಲೋಚನೆಯನ್ನು ಟಿವಿ ಅವರು ಒಂದು ಸುದ್ದಿ ಅಂತ ಪ್ರಸಾರ ಮಾಡಿದ್ದಾರೆ. 1/2 pic.twitter.com/RytjvVc4zu
— YSV Datta (@YSV_Datta) December 1, 2020
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.