ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘70 ವರ್ಷಗಳಿಂದ ರಾಜ್ಯದಲ್ಲಿ ಉತ್ತಮ ಸಾರಿಗೆ ಸೌಲಭ್ಯ ನೀಡುತ್ತ, ಸಾರ್ವಜನಿಕರ ಜೀವನಾಡಿ ಎನ್ನುವ ಹೆಗ್ಗಳಿಕೆಗೆ ಸಾರಿಗೆ ಸಂಸ್ಥೆ ಪಾತ್ರವಾಗಿದೆ. ಸಂಸ್ಥೆಯ ನಾಲ್ಕು ನಿಗಮಗಳು ಕೋವಿಡ್ ಲಾಕ್ಡೌನ್ನಿಂದ ತೀವ್ರ ನಷ್ಟದಲ್ಲಿತ್ತು. ಚೇತರಿಸಿಕೊಳ್ಳುತ್ತಿದೆ ಎನ್ನುವಷ್ಟರಲ್ಲಿ ಕೋವಿಡ್ ಎರಡನೇ ಅಲೆಯ ಭೀತಿ ಎದುರಾಗಿದೆ. ಈ ನಡುವೆಯೇ ಸಾರಿಗೆ ನೌಕರರ ಕೂಟ ಹಮ್ಮಿಕೊಂಡಿರುವ ಅನಿರ್ದಿಷ್ಟಾವಧಿ ಮುಷ್ಕರ ಸಂಸ್ಥೆಯ ಅಳಿವು, ಉಳಿವಿನ ಬಗ್ಗೆ ಪ್ರಶ್ನೆ ಮೂಡಿಸಿದೆ’ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.