ಕೋವಿಡ್ ಸಂದರ್ಭದಲ್ಲಿ ಬಾಲ್ಯವಿವಾಹಗಳ ಸಂಖ್ಯೆ ಹೆಚ್ಚಾಗಿದ್ದರ ಕುರಿತು ‘ಪ್ರಜಾವಾಣಿ‘ಯಲ್ಲಿ ಪ್ರಕಟವಾದ ವರದಿಯನ್ನು ಬಿಜೆಪಿಯ ಮಹಾಂತೇಶ್ ಕವಟಗಿಮಠ ಸದನದಲ್ಲಿ ಪ್ರಸ್ತಾಪಿಸಿದರು. ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ‘ಬಾಲ್ಯವಿವಾಹ ತಡೆ ಕುರಿತು ಕಿರುಚಿತ್ರಗಳನ್ನು ಸಿದ್ಧಪಡಿಸಿ, ಇವುಗಳನ್ನು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳ ಮೂಲಕ ಪ್ರಸಾರ ಮಾಡುವ ಬಗ್ಗೆ ಕ್ರಿಯಾಯೋಜನೆ ರೂಪಿಸಲಾಗುತ್ತಿದೆ’ ಎಂದೂ ಮಾಹಿತಿ ನೀಡಿದರು.