ಬೆಳಗಾವಿ: ‘ಸಾರಿಗೆ ನೌಕರರು ಶೇ. 8 ವೇತನ ಹೆಚ್ಚಳಕ್ಕೆ ಒಪ್ಪಿ ಕೆಲಸ ಮಾಡಲಿ. ಇಲ್ಲದಿದ್ದರೆ ಕಠಿಣ ಕ್ರಮ ಅನಿವಾರ್ಯವಾಗುತ್ತದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಎಚ್ಚರಿಕೆ ನೀಡಿದರು.
ಇಲ್ಲಿ ಬುಧವಾರ ರಾತ್ರಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಗುರುವಾರ (ಏ.8) ಬೆಂಗಳೂರಿನಲ್ಲಿ ಮತ್ತೊಂದು ಹಂತದ ಸಭೆ ನಡೆಸಿ ನೌಕರರ ಮನವೊಲಿಕೆಗೆ ಪ್ರಯತ್ನಿಸುತ್ತೇನೆ. ಕೊನೆಯ ಬಾರಿಗೆ ವಿನಂತಿ ಮಾಡುತ್ತಿದ್ದೇನೆ. ಒಪ್ಪದಿದ್ದರೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ’ ಎಂದು ತಿಳಿಸಿದರು.